Categories: ಲೇಖನ

ಮನೆ ಗೆದ್ದು ಮಾರು ಗೆಲ್ಲು ಅಥವಾ ಮನ ಗೆದ್ದು ಮಾರು ಗೆಲ್ಲು……

ಮನೆ ಗೆದ್ದು ಮಾರು ಗೆಲ್ಲು
ಅಥವಾ
ಮನ ಗೆದ್ದು ಮಾರು ಗೆಲ್ಲು……

ಹೀಗೆ ಒಂದು ಜನಪದೀಯ ಮಾತು ಚಾಲ್ತಿಯಲ್ಲಿದೆ. ಇದರ ವಾಸ್ತವತೆಯ ಬಗ್ಗೆ ಯೋಚಿಸತೊಡಗಿದಾಗ…..

ಮನೆ ಎಂದರೆ ಕುಟುಂಬ. ಕುಟುಂಬವನ್ನು ಸರಿಯಾಗಿ ಮತ್ತು ತೃಪ್ತಿಕರವಾಗಿ ನಿರ್ವಹಿಸಿದ ನಂತರ ಇತರ ಮುಖ್ಯವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ. ಮನೆಯಲ್ಲಿಯೇ ಅತೃಪ್ತಿ ಇದ್ದರೆ ಅಥವಾ ಅದನ್ನು ಉತ್ತಮವಾಗಿ ನಿರ್ವಹಿಸದೆ ಸಮಾಜವನ್ನು ತಿದ್ದುವುದು ಸಾಧ್ಯವಿಲ್ಲ ಅದು ಒಂದು ರೀತಿಯ ವ್ಯಂಗ್ಯ ಎಂದು ಹೇಳಲಾಗುತ್ತದೆ. ಇದು ಸರಿಯೇ – ವಾಸ್ತವವೇ….

ಆಧುನಿಕ ಸಂಕೀರ್ಣ ಬದುಕಿನ ಕುಟುಂಬಗಳನ್ನು ಗಮನಿಸಿದಾಗ ಮನೆ ಎಂಬ ಈ ಮಾತುಗಳು ತುಂಬಾ ಪರಿಣಾಮಕಾರಿ ಎಂದು ಅನಿಸುವುದಿಲ್ಲ. ಮನೆ ಗೆಲ್ಲುವುದು ಅದರಲ್ಲೂ ಕೌಟುಂಬಿಕ ವ್ಯವಸ್ಥೆಯನ್ನು ಗೆಲ್ಲುವುದು ಅಷ್ಟು ಸುಲಭವಲ್ಲ. ಬಹುಶಃ ನಂಬುಗೆಯ ಏಳು ಜನ್ಮವಾದರೂ ಸಾಕಾಗುವುದಿಲ್ಲ.

ಮಧ್ಯಮವರ್ಗದ ಬದುಕು ತುಂಬಾ ಕಷ್ಟಕರ. ಅಪ್ಪ ಅಮ್ಮ ಗಂಡ ಹೆಂಡತಿ ಮಕ್ಕಳು ಅತ್ತೆ ಮಾವ ಸೊಸೆ ಅಳಿಯ ಮೈದುನ ಅತ್ತಿಗೆ ಅಜ್ಜ ಅಜ್ಜಿ ಈ ರೀತಿಯ ಸಂಬಂಧಗಳನ್ನು ನಿಭಾಯಿಸುವುದು ತುಂಬಾ ಕಠಿಣ. ನಗರ ಜೀವನದಲ್ಲಿ ಮತ್ತಷ್ಟು ಕಷ್ಟ. ಒಬ್ಬೊಬ್ಬರ ಅಭಿರುಚಿ, ಮನೋಭಾವ, ಅವರ ಗೆಳೆಯರ ಮಾತುಗಳು ಹೀಗೆ ಸಾಮಾಜಿಕ ವ್ಯವಸ್ಥೆಯೇ ಸ್ವಲ್ಪ ಗೊಂದಲದ ಗೂಡಾಗಿದೆ. ದೂರದಿಂದ ಹೇಳುವುದು, ಹೊಂದಾಣಿಕೆ ಅವಶ್ಯಕತೆ ಇದೆ ಎಂಬುದೆಲ್ಲಾ ಸುಲಭ. ವಾಸ್ತವದಲ್ಲಿ ಇದು ಬಹುಕಷ್ಟ. ಇಡೀ ಬದುಕನ್ನೇ ಇದಕ್ಕಾಗಿ ಸವೆಸಬೇಕಾಗುತ್ತದೆ. ಆಗಲೂ ಸರಿಯಾಗುತ್ತದೆ ಎಂಬ ಖಚಿತತೆ ಇಲ್ಲ. ಕೆಲವು ಉದಾಹರಣೆಗಳನ್ನು ಹೊರತುಪಡಿಸಿ ಬಹುತೇಕ ಕುಟುಂಬಗಳಲ್ಲಿ ವಿವಿಧ ಬಗೆಯ ಅಸಮಾಧಾನಗಳು ಇದ್ದೇ ಇರುತ್ತದೆ. ಕೆಲವು ಬಹಿರಂಗವಾಗಿ ವಿಭಜನೆಯಾರೆ ಮತ್ತೆ ಕೆಲವು ಆಂತರಿಕವಾಗಿ ಪ್ರತ್ಯೇಕಿಸಲ್ಪಟ್ಟಿರುತ್ತದೆ. ಹಾಗಾದರೆ ಈ ಪರಿಸ್ಥಿತಿಯಲ್ಲಿರುವ ಯಾವುದೇ ವ್ಯಕ್ತಿ ಸಾಮಾಜಿಕ ಸೇವೆಯಲ್ಲಿ ತೊಡಗಲು ಅನರ್ಹನೇ. ಮನೆಯೇ ಗೆಲ್ಲಲಾಗದ ವ್ಯಕ್ತಿ ಹೊರಗೆ ಇನ್ನೇನು ಮಾಡಲು ಸಾಧ್ಯ ಎಂದು ನಿರ್ಲಕ್ಷಿಸಬೇಕೆ.

ಸಮಾಜ ಸೇವೆಯಲ್ಲಿ ತೊಡಗಬೇಕೆಂಬ ತುಡಿತದ ವ್ಯಕ್ತಿ ಯಾವುದೇ ಸಾಂಸಾರಿಕ ಜವಾಬ್ದಾರಿ ಹೊಂದಿರಬಾರದೇ ಅಥವಾ ಸಾಂಸಾರಿಕ ಬಂಧನಕ್ಕೆ ಒಳಗಾದ ಕೆಲವು ವರ್ಷಗಳ ನಂತರ ಸೇವೆ ಮಾಡಬೇಕೆಂಬ ಅಭಿಲಾಷೆ ಉಂಟಾದಾಗ ಕೌಟುಂಬಿಕ ವ್ಯವಸ್ಥೆಯ ವಿಫಲತೆ ಅದಕ್ಕೆ ಅಡ್ಡಿಯಾಗಬಹುದೇ ಅಥವಾ ವೈಯಕ್ತಿಕ ಬದುಕು ಮತ್ತು ಸಾಮಾಜಿಕ ಸೇವೆ ಎರಡು ಬೇರೆ ಬೇರೆಯೇ ಅಥವಾ ಒಂದಕ್ಕೊಂದು ಪೂರಕವೇ ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲವೇ…….

ಉತ್ತರ ಅಷ್ಟು ಸಲುಭವಲ್ಲ. ಭಾರತದ ಸಂಕೀರ್ಣ ಸಾಮಾಜಿಕ ವ್ಯವಸ್ಥೆಯಲ್ಲಿ ಇದು ಬಹು ಆಯಾಮ ಹೊಂದಿದೆ ಮತ್ತು ವೈಯಕ್ತಿಕವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರುತ್ತದೆ.

ಆದರೆ ಮನ ಗೆದ್ದು ಮಾರು ಗೆಲ್ಲು ಎಂಬುದು ವಾಸ್ತವಕ್ಕೆ ಹೆಚ್ಚು ಹತ್ತಿರವಾಗಿದೆ.

ಮನೆ ಎಂಬ ವಿಷಯ ಬಂದಾಗ ಅಲ್ಲಿ ಇತರರು ಇರುತ್ತಾರೆ. ಆದರೆ ಮನ ಸಂಪೂರ್ಣ ವೈಯಕ್ತಿಕ ಮತ್ತು ನಾವು ಒಬ್ಬರೇ ಇರುತ್ತೇವೆ. ನಮ್ಮ ಎಲ್ಲಾ ಅರಿಷಡ್ವರ್ಗಗಳ ನಿಯಂತ್ರಣ ನಮಗೆ ಸೇರಿರುತ್ತದೆ. ಸಮಾಜ ಸೇವೆಗೆ ಬೇಕಾದ ಮತ್ತು ಬೇಡದ ಎಲ್ಲವನ್ನೂ ನಾವೇ ನಿರ್ಧರಿಸಬಹುದು.

ನಮ್ಮ ಒಳಗಿನ ಎಲ್ಲಾ ಸ್ವಾರ್ಥ, ದುರಾಸೆ, ಮುಖವಾಡಗಳನ್ನು ಆತ್ಮಾವಲೋಕನ ಮಾಡಿಕೊಂಡು ನಿಷ್ಕಲ್ಮಶ ಮನಸ್ಸಿನಿಂದ ಮನ ಗೆದ್ದು ಮಾರು ಗೆಲ್ಲಲು ಹೊರಡಬಹುದು. ಆದ್ದರಿಂದ ಮನೆ ಗೆದ್ದು ಮಾರು ಗೆಲ್ಲು ಎಂಬುದು ಕಷ್ಟ ಸಾಧ್ಯ. ಕೆಲವರಿಗೆ ಮಾತ್ರ ಸೀಮಿತ. ಆದರೆ ಮನ ಗೆದ್ದು ಮಾರು ಗೆಲ್ಲು ಎಂಬುದು ವಾಸ್ತವಕ್ಕೆ ಹತ್ತಿರ ಮತ್ತು ಪ್ರತಿಯೊಬ್ಬರು ಪ್ರಯತ್ನಿಸಬಹುದು.‌

ಇದರ ಒಟ್ಟು ಸಾರಾಂಶ…..

ಒಂದು ವೇಳೆ ಮನೆ ಗೆದ್ದು ಮಾರು ಗೆಲ್ಲಲು ಪ್ರಯತ್ನಿಸಿದರೆ ಉತ್ತಮ, ಹಾಗೆಯೇ ಮನೆ ಗೆಲ್ಲಲು ವಿಫಲರಾದರು ಅದರ ಅನುಭವದ ಆಧಾರದಲ್ಲಿ ಮಾರು ಗೆಲ್ಲಲು ಹೊರಡುವುದು ತಪ್ಪೇನಲ್ಲ. ಇನ್ನಷ್ಟು ಹೆಚ್ಚು ತೊಡಗಿಸಿಕೊಳ್ಳುವ ಮುಖಾಂತರ ಇಲ್ಲಿ ಯಶಸ್ವಿಯಾಗುವ ಸಾಧ್ಯತೆಯು ಇರುತ್ತದೆ. ಇದು ವ್ಯಕ್ತಿಗಳ ಮನಸ್ಥಿತಿಯನ್ನು – ವ್ಯಕ್ತಿತ್ವವನ್ನು ಅವಲಂಬಿಸಿರುತ್ತದೆ.

ಜೊತೆಗೆ ಮನ ಗೆದ್ದು ಮಾರು ಗೆಲ್ಲುವುದು ಅತ್ಯಂತ ಅವಶ್ಯ. ಮನ ಗೆಲ್ಲದೇ ಮಾರು ಗೆಲ್ಲುವುದು ಆತ್ಮವಂಚನೆಯಾಗುತ್ತದೆ.

ಲೋಕ ರೂಢಿಯ ಗಾದೆ ಮಾತುಗಳ ಒಂದು ಸಣ್ಣ ಸರಳ ವಿಮರ್ಶೆ. ಇದನ್ನು ಮತ್ತಷ್ಟು ವಿಶಾಲವಾಗಿ – ಆಳವಾಗಿ ಇನ್ನೂ ವಿವಿಧ ಆಯಾಮಗಳಲ್ಲಿ ಚರ್ಚಿಸಬಹುದು. ಆ ನಿಟ್ಟಿನಲ್ಲಿ ಯೋಚಿಸಿ ಎಂಬ ಮನವಿಯೊಂದಿಗೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

4 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

12 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

15 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago