ಮನೆ‌ ಬಳಿ ಇದ್ದ 55‌ಸಾವಿರ ಮೌಲ್ಯದ ಗಾಂಜಾ ವಶ

ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ

ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ  ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು  ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ  ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ  ಸಿಬ್ಬಂದಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ,  ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

3 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

4 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

6 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

11 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

16 hours ago