ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ
ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ ಸಿಬ್ಬಂದಿ ದಾಳಿ ಮಾಡಿದ್ದಾರೆ.
ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ, ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…