ಮನೆ‌ ಬಳಿ ಇದ್ದ 55‌ಸಾವಿರ ಮೌಲ್ಯದ ಗಾಂಜಾ ವಶ

ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ

ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ  ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು  ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ  ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ  ಸಿಬ್ಬಂದಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ,  ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು

Ramesh Babu

Journalist

Recent Posts

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 minutes ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

50 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

54 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

5 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

7 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

8 hours ago