ಮನೆ‌ ಬಳಿ ಇದ್ದ 55‌ಸಾವಿರ ಮೌಲ್ಯದ ಗಾಂಜಾ ವಶ

ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ

ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ  ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು  ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ  ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ  ಸಿಬ್ಬಂದಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ,  ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

27 minutes ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

12 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

16 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

18 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

20 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

23 hours ago