ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ
ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ ಸಿಬ್ಬಂದಿ ದಾಳಿ ಮಾಡಿದ್ದಾರೆ.
ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ, ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…