‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ

“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಅವಶ್ಯಕತೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ದೊರಕಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಮೊದಲನೇದಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಅವರ ಮನೆ ಹತ್ತಿರ ಹೋಗಿ ಅವರಿಗೆ ಬೇಕಾದಂತಹ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

ಇಂದೇ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ  ಇಲಾಖೆಯ ಯೋಜನೆಗಳಾದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ, ಪೋಷಣ ಭತ್ಯೆ ಸಾಧನ ಸಲಕರಣೆಗಳು, ಗುಂಪು ರಚನೆ, ವೈದ್ಯಕೀಯ ಪರಿಹಾರ ನಿಧಿ, ಶೇಕಡ ಐದರ ಅನುದಾನದ ಸೌಲಭ್ಯದ ಬಗ್ಗೆ, ವಿದ್ಯಾರ್ಥಿ ವೇತನ ವಿದ್ಯಾರ್ಥಿ ಯೋಜನೆಗಳು, ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು ಲ್ಯಾಪ್ ಟಾಪ್ ನೀಡುವ ಯೋಜನೆ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿ ಮದುವೆಯಾದಲ್ಲಿ ಪ್ರೋತ್ಸಾಹ ಧನ ನೀಡುವ ಯೋಜನೆ, ಅಂಗವಿಕಲ ಮಕ್ಕಳ ಶಿಶು ಕೇಂದ್ರ ಯೋಜನೆ,ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಿರಿಯ, ನಾಗರಿಕರ ಕಲ್ಯಾಣಕ್ಕಾಗಿ ಯೋಜನೆಗಳು, ವಿವಿಧ ರೀತಿಯ ಯೋಜನೆಗಳನ್ನು ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿಗಳಾದ ಜಗದೀಶ ಎನ್.ಎಂ, ಕಚೇರಿ ಸಿಬ್ಬಂದಿ, ಡಿಡಿಆರ್ ಸಿ ಸಿಬ್ಬಂದಿ, ಗ್ಯಾಸ್ ಸಂಸ್ಥೆ ಸಿಬ್ಬಂದಿ, ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರದ ಸಿಬ್ಬಂದಿ,ಪುನರ್ವಸತಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವಿಕಲಚೇತನರ ಸಹಾಯವಾಣಿ ಕೇಂದ್ರ 08029787441

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

5 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

6 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

19 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

19 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

22 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

22 hours ago