‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ

“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಅವಶ್ಯಕತೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ದೊರಕಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಮೊದಲನೇದಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಅವರ ಮನೆ ಹತ್ತಿರ ಹೋಗಿ ಅವರಿಗೆ ಬೇಕಾದಂತಹ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

ಇಂದೇ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ  ಇಲಾಖೆಯ ಯೋಜನೆಗಳಾದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ, ಪೋಷಣ ಭತ್ಯೆ ಸಾಧನ ಸಲಕರಣೆಗಳು, ಗುಂಪು ರಚನೆ, ವೈದ್ಯಕೀಯ ಪರಿಹಾರ ನಿಧಿ, ಶೇಕಡ ಐದರ ಅನುದಾನದ ಸೌಲಭ್ಯದ ಬಗ್ಗೆ, ವಿದ್ಯಾರ್ಥಿ ವೇತನ ವಿದ್ಯಾರ್ಥಿ ಯೋಜನೆಗಳು, ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು ಲ್ಯಾಪ್ ಟಾಪ್ ನೀಡುವ ಯೋಜನೆ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿ ಮದುವೆಯಾದಲ್ಲಿ ಪ್ರೋತ್ಸಾಹ ಧನ ನೀಡುವ ಯೋಜನೆ, ಅಂಗವಿಕಲ ಮಕ್ಕಳ ಶಿಶು ಕೇಂದ್ರ ಯೋಜನೆ,ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಿರಿಯ, ನಾಗರಿಕರ ಕಲ್ಯಾಣಕ್ಕಾಗಿ ಯೋಜನೆಗಳು, ವಿವಿಧ ರೀತಿಯ ಯೋಜನೆಗಳನ್ನು ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿಗಳಾದ ಜಗದೀಶ ಎನ್.ಎಂ, ಕಚೇರಿ ಸಿಬ್ಬಂದಿ, ಡಿಡಿಆರ್ ಸಿ ಸಿಬ್ಬಂದಿ, ಗ್ಯಾಸ್ ಸಂಸ್ಥೆ ಸಿಬ್ಬಂದಿ, ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರದ ಸಿಬ್ಬಂದಿ,ಪುನರ್ವಸತಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವಿಕಲಚೇತನರ ಸಹಾಯವಾಣಿ ಕೇಂದ್ರ 08029787441

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

57 minutes ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

3 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

4 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

8 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

18 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago