‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ

“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಅವಶ್ಯಕತೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ದೊರಕಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಮೊದಲನೇದಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಅವರ ಮನೆ ಹತ್ತಿರ ಹೋಗಿ ಅವರಿಗೆ ಬೇಕಾದಂತಹ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

ಇಂದೇ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ  ಇಲಾಖೆಯ ಯೋಜನೆಗಳಾದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ, ಪೋಷಣ ಭತ್ಯೆ ಸಾಧನ ಸಲಕರಣೆಗಳು, ಗುಂಪು ರಚನೆ, ವೈದ್ಯಕೀಯ ಪರಿಹಾರ ನಿಧಿ, ಶೇಕಡ ಐದರ ಅನುದಾನದ ಸೌಲಭ್ಯದ ಬಗ್ಗೆ, ವಿದ್ಯಾರ್ಥಿ ವೇತನ ವಿದ್ಯಾರ್ಥಿ ಯೋಜನೆಗಳು, ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು ಲ್ಯಾಪ್ ಟಾಪ್ ನೀಡುವ ಯೋಜನೆ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿ ಮದುವೆಯಾದಲ್ಲಿ ಪ್ರೋತ್ಸಾಹ ಧನ ನೀಡುವ ಯೋಜನೆ, ಅಂಗವಿಕಲ ಮಕ್ಕಳ ಶಿಶು ಕೇಂದ್ರ ಯೋಜನೆ,ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಿರಿಯ, ನಾಗರಿಕರ ಕಲ್ಯಾಣಕ್ಕಾಗಿ ಯೋಜನೆಗಳು, ವಿವಿಧ ರೀತಿಯ ಯೋಜನೆಗಳನ್ನು ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿಗಳಾದ ಜಗದೀಶ ಎನ್.ಎಂ, ಕಚೇರಿ ಸಿಬ್ಬಂದಿ, ಡಿಡಿಆರ್ ಸಿ ಸಿಬ್ಬಂದಿ, ಗ್ಯಾಸ್ ಸಂಸ್ಥೆ ಸಿಬ್ಬಂದಿ, ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರದ ಸಿಬ್ಬಂದಿ,ಪುನರ್ವಸತಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವಿಕಲಚೇತನರ ಸಹಾಯವಾಣಿ ಕೇಂದ್ರ 08029787441

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

1 hour ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago