‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ

“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಅವಶ್ಯಕತೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ದೊರಕಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಮೊದಲನೇದಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ನೇರವಾಗಿ ಅವರ ಮನೆ ಹತ್ತಿರ ಹೋಗಿ ಅವರಿಗೆ ಬೇಕಾದಂತಹ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

ಇಂದೇ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ  ಇಲಾಖೆಯ ಯೋಜನೆಗಳಾದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ, ಪೋಷಣ ಭತ್ಯೆ ಸಾಧನ ಸಲಕರಣೆಗಳು, ಗುಂಪು ರಚನೆ, ವೈದ್ಯಕೀಯ ಪರಿಹಾರ ನಿಧಿ, ಶೇಕಡ ಐದರ ಅನುದಾನದ ಸೌಲಭ್ಯದ ಬಗ್ಗೆ, ವಿದ್ಯಾರ್ಥಿ ವೇತನ ವಿದ್ಯಾರ್ಥಿ ಯೋಜನೆಗಳು, ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು ಲ್ಯಾಪ್ ಟಾಪ್ ನೀಡುವ ಯೋಜನೆ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿ ಮದುವೆಯಾದಲ್ಲಿ ಪ್ರೋತ್ಸಾಹ ಧನ ನೀಡುವ ಯೋಜನೆ, ಅಂಗವಿಕಲ ಮಕ್ಕಳ ಶಿಶು ಕೇಂದ್ರ ಯೋಜನೆ,ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಿರಿಯ, ನಾಗರಿಕರ ಕಲ್ಯಾಣಕ್ಕಾಗಿ ಯೋಜನೆಗಳು, ವಿವಿಧ ರೀತಿಯ ಯೋಜನೆಗಳನ್ನು ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿಗಳಾದ ಜಗದೀಶ ಎನ್.ಎಂ, ಕಚೇರಿ ಸಿಬ್ಬಂದಿ, ಡಿಡಿಆರ್ ಸಿ ಸಿಬ್ಬಂದಿ, ಗ್ಯಾಸ್ ಸಂಸ್ಥೆ ಸಿಬ್ಬಂದಿ, ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರದ ಸಿಬ್ಬಂದಿ,ಪುನರ್ವಸತಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವಿಕಲಚೇತನರ ಸಹಾಯವಾಣಿ ಕೇಂದ್ರ 08029787441

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

21 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago