ಮನೆ ಬಾಗಿಲು ಒಡೆದು ನಗ, ನಗದು ದೋಚಿದ ಕಳ್ಳರು

ಖತರ್ನಾಕ್ ಕಳ್ಳರು ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕದ್ದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹುಡ್ಯ ಗ್ರಾಮದಲ್ಲಿರುವ ಸೋಮಣ್ಣ ಎನ್ನುವವರ ಮನೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ನಿನ್ನೆ ಸೋಮಣ್ಣ ಅವರ ಕುಟುಂಬ ಮೊಮ್ಮಗನ ಜನ್ಮದಿನದ ಕಾರಣ ಸುರದೇನಪುರಕ್ಕೆ ತೆರಳಿದ್ದರಂತೆ ಇದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆ ಬಾಗಿಲು, ಬೀಗವನ್ನು ಆರೆಕೋಲು ಬಳಸಿ ಮೀಟಿ ಮನೆಗೆ ನುಗ್ಗಿ, ಸುಮಾರು 130 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ,ಎಟಿಎಂ ಕಾರ್ಡ್ ಗಳು, 50 ಸಾವಿರ ನಗದು ಹಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ…

ಇನ್ನೂ ಒಡವೆಗಳನ್ನು ಇಡಲಾಗಿದ್ದ ಬ್ಯಾಗ್‌ ಹಾಗೂ ಬಾಕ್ಸ್‌ಗಳನ್ನು ಮನೆಯ ಸಮೀಪದಲ್ಲಿಯೇ ಎಸೆದು ಹೋಗಿದ್ದಾರೆಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಸೋಮಣ್ಣ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಚಿನ್ನಾ, ಬೆಳ್ಳಿ, ನಗದು ಕಳೆದುಕೊಂಡ ಮನೆಯವರು ಚಿಂತಾಕ್ರಾಂತರಾಗಿದ್ದಾರೆ. ಪೊಲೀಸರು ಕಳ್ಳರ ಜಾಡು ಪತ್ತೆ ಮಾಡಲು ವಿವಿಧ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago