ಖತರ್ನಾಕ್ ಕಳ್ಳರು ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕದ್ದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹುಡ್ಯ ಗ್ರಾಮದಲ್ಲಿರುವ ಸೋಮಣ್ಣ ಎನ್ನುವವರ ಮನೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ನಿನ್ನೆ ಸೋಮಣ್ಣ ಅವರ ಕುಟುಂಬ ಮೊಮ್ಮಗನ ಜನ್ಮದಿನದ ಕಾರಣ ಸುರದೇನಪುರಕ್ಕೆ ತೆರಳಿದ್ದರಂತೆ ಇದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆ ಬಾಗಿಲು, ಬೀಗವನ್ನು ಆರೆಕೋಲು ಬಳಸಿ ಮೀಟಿ ಮನೆಗೆ ನುಗ್ಗಿ, ಸುಮಾರು 130 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ,ಎಟಿಎಂ ಕಾರ್ಡ್ ಗಳು, 50 ಸಾವಿರ ನಗದು ಹಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ…
ಇನ್ನೂ ಒಡವೆಗಳನ್ನು ಇಡಲಾಗಿದ್ದ ಬ್ಯಾಗ್ ಹಾಗೂ ಬಾಕ್ಸ್ಗಳನ್ನು ಮನೆಯ ಸಮೀಪದಲ್ಲಿಯೇ ಎಸೆದು ಹೋಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಸೋಮಣ್ಣ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಚಿನ್ನಾ, ಬೆಳ್ಳಿ, ನಗದು ಕಳೆದುಕೊಂಡ ಮನೆಯವರು ಚಿಂತಾಕ್ರಾಂತರಾಗಿದ್ದಾರೆ. ಪೊಲೀಸರು ಕಳ್ಳರ ಜಾಡು ಪತ್ತೆ ಮಾಡಲು ವಿವಿಧ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…