ಖತರ್ನಾಕ್ ಕಳ್ಳರು ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕದ್ದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹುಡ್ಯ ಗ್ರಾಮದಲ್ಲಿರುವ ಸೋಮಣ್ಣ ಎನ್ನುವವರ ಮನೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ನಿನ್ನೆ ಸೋಮಣ್ಣ ಅವರ ಕುಟುಂಬ ಮೊಮ್ಮಗನ ಜನ್ಮದಿನದ ಕಾರಣ ಸುರದೇನಪುರಕ್ಕೆ ತೆರಳಿದ್ದರಂತೆ ಇದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆ ಬಾಗಿಲು, ಬೀಗವನ್ನು ಆರೆಕೋಲು ಬಳಸಿ ಮೀಟಿ ಮನೆಗೆ ನುಗ್ಗಿ, ಸುಮಾರು 130 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ,ಎಟಿಎಂ ಕಾರ್ಡ್ ಗಳು, 50 ಸಾವಿರ ನಗದು ಹಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ…
ಇನ್ನೂ ಒಡವೆಗಳನ್ನು ಇಡಲಾಗಿದ್ದ ಬ್ಯಾಗ್ ಹಾಗೂ ಬಾಕ್ಸ್ಗಳನ್ನು ಮನೆಯ ಸಮೀಪದಲ್ಲಿಯೇ ಎಸೆದು ಹೋಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಸೋಮಣ್ಣ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಚಿನ್ನಾ, ಬೆಳ್ಳಿ, ನಗದು ಕಳೆದುಕೊಂಡ ಮನೆಯವರು ಚಿಂತಾಕ್ರಾಂತರಾಗಿದ್ದಾರೆ. ಪೊಲೀಸರು ಕಳ್ಳರ ಜಾಡು ಪತ್ತೆ ಮಾಡಲು ವಿವಿಧ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…