ದೊಡ್ಡಬಳ್ಳಾಪುರ: ಆಯುದ ಪೂಜೆ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ದೋಚಿರುವ ಪ್ರಕರಣ ನಡೆದಿದೆ.
ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಲಾಗಿದೆ.
ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ ಗಳನ್ನು ಖಾಲಿ ಮಾಡಿ ಕಳವು ಮಾಡಿರುವ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ.
ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…