ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…