ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…