ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…