ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…