ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…