ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…