ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…