ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ ನಡೆದಿದೆ.
ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ ನಾಲ್ಕು ಚಿನ್ನದ ಉಂಗುರ, ಎರಡು ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ಮನೆಯ ಮೇಲೆ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…