ಮನೆ ಬಾಗಿಲು ಮೀಟಿ  ನಗದು, ಚಿನ್ನ ಕದ್ದ ಕಳ್ಳರು: ಸ್ಥಳಕ್ಕೆ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಮನೆಯ ಬಾಗಿಲು‌ ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌ ನಡೆದಿದೆ.

ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ‌ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ‌ ನಾಲ್ಕು ಚಿನ್ನದ ಉಂಗುರ, ಎರಡು‌ ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮನೆಯ ಮೇಲೆ‌ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು‌ ಮೀಟಿ  ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.

ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗು ಸಿಬ್ಬಂದಿ ಪರಿಶೀಲಿಸಿದರು. ಶ್ವಾನದಳ ಕೂಡ ಪರಿಶೀಲನೆ ನಡೆಸಿತು. ನಂಜುಂಡಪ್ಪ‌ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago