ಮನೆ ಬಾಗಿಲು ಮೀಟಿ  ನಗದು, ಚಿನ್ನ ಕದ್ದ ಕಳ್ಳರು: ಸ್ಥಳಕ್ಕೆ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಮನೆಯ ಬಾಗಿಲು‌ ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌ ನಡೆದಿದೆ.

ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ‌ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ‌ ನಾಲ್ಕು ಚಿನ್ನದ ಉಂಗುರ, ಎರಡು‌ ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮನೆಯ ಮೇಲೆ‌ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು‌ ಮೀಟಿ  ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.

ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗು ಸಿಬ್ಬಂದಿ ಪರಿಶೀಲಿಸಿದರು. ಶ್ವಾನದಳ ಕೂಡ ಪರಿಶೀಲನೆ ನಡೆಸಿತು. ನಂಜುಂಡಪ್ಪ‌ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

12 minutes ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

6 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

6 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

23 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago