ಮನೆ ಬೀರುವಿನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಿಕಿಯಲ್ಲಿದ್ದ ಬೀಗದ ಕೀ ತೆಗೆದುಕೊಂಡು ಡೋರ್ ಓಪನ್ ಮಾಡಿ ಮನೆಯೊಳಗೆ ಒಳಹೊಕ್ಕ ಕಳ್ಳರು 1 ಲಕ್ಷದ 85 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಒಂದು ಚಿನ್ನದ ನೆಕ್ಲೇಸ್, 8 ಗ್ರಾಂ ತೂಕದ ಒಂದು ಕೊರಳ ಚೈನ್, 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಸೇರಿದಂತೆ 5000 ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಅನಂತ್ ಕುಮಾರ್ ಕೆ ಎಂಬುವವರ ಮನೆಯಲ್ಲಿ ನಡೆದಿದೆ.

ಏ.29 ರಂದು ಘಟನೆ ನಡೆದಿದ್ದು, ಎಲ್ಲಾ ಕಡೆ ಹುಡುಕಾಡಿದ ನಂತರ ಒಡವೆಗಳು ಸಿಗದ ಕಾರಣ ತಡವಾಗಿ ಅಂದರೆ ಮೇ.2ರಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ.

ದೂರುದಾರ ಅನಂತ್ ಕುಮಾರ್ ತನ್ನ ಹೆಂಡತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಮನೆಯೊಂದನ್ನು ಲೀಸ್ ಗೆ ಪಡೆದು ವಾಸವಾಗಿದ್ದರು. ಗಂಡ ಹೆಂಡತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಲೀಸ್ ಗೆ ಪಡೆದ ಮನೆಯಲ್ಲಿ ಮನೆಯ ಡೋರ್ ಲಾಕ್ ಕೀಯನ್ನು ಮನೆಯ ಬಾಗಿಲು ಪಕ್ಕದ ಕಿಟಕಿಯಲ್ಲಿ ಇಡುತ್ತಿದ್ದೇವು. ನಾವು ಡೋರ್ ಲಾಕ್ ಮಾಡಿ ಕೀಯನ್ನು ಕಿಟಕಿಯಲ್ಲಿ ಇಡುವ ವಿಚಾರ ಮನೆಯ ಪಕ್ಕದಲ್ಲಿ ವಾಸವಾಗಿರುವ ದೂರುದಾರನ ಚಿಕ್ಕಮ್ಮನ ಮಗಳು ಆಕೆಯ ಗಂಡ ನೋಡಿದ್ದರು. ನಾವು ಮನೆಯಲ್ಲಿ ಇಲ್ಲದೆ ಇರುವಾಗ ಚಿಕ್ಕಮ್ಮನ ಮಗಳು ಆಕೆಯ ಗಂಡ ಕೆಲವು ಬಾರಿ ಮನೆಯ ಫ್ರಿಡ್ಜ್ ನಲ್ಲಿ ತರಕಾರಿ ಇಡುವ ಸಲುವಾಗಿ ಮನೆಯ ಡೋ‌ರ್ ಲಾಕ್ ತೆಗೆದು ಮನೆಯ ಒಳಗೆ ಬಂದು ಹೋಗುತ್ತಿದ್ದರು ಎಂದು ದೂರುದಾರ ಅನಂತ್ ಕುಮಾರ್ ತಿಳಿಸಿದ್ದಾರೆ.

ನಾವು ಒಡವೆಗಳನ್ನು ಮನೆಯಲ್ಲಿನ ಬೀರುವಿನಲ್ಲಿ ಇಡುತ್ತಿದ್ದೆವು ಈ ಒಡವೆಗಳನ್ನು ಮಾ.31 ರಂದು ದೂರುದಾರ ನೋಡಿದ್ದೆವು, ನಂತರ ಏ.29ರಂದು ಸಂಜೆ ಸುಮಾರು 5-00 ಗಂಟೆಯಲ್ಲಿ ಬೀರು ತೆಗೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳ ಪೈಕಿ ಒಂದು ಚಿನ್ನದ ನೆಕ್ಲೇಸ್ – ಸುಮಾರು 10 ಗ್ರಾಂ, ಒಂದು ಕೊರಳ ಚೈನ್-ಸುಮಾರು 8 ಗ್ರಾಂ ಹಾಗೂ ಎರಡು ಚಿನ್ನದ ಉಂಗುರಗಳು – ಸುಮಾರು 5 ಗ್ರಾಂ ಹಾಗೂ 5000 ರೂ. ನಗದು ಹಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಇವುಗಳ ಅಂದಾಜು ಬೆಲೆ ಸುಮಾರು 1,85,000 ರೂಪಾಯಿಗಳು ಆಗಿರುತ್ತದೆ ಎಂದು ಹೇಳಿದ್ದಾರೆ.

ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಡೋರ್ ಲಾಕ್ ಕೀ ಬಳಸಿದ ಕಳ್ಳರು ಮನೆಯೊಳಗೆ ಬಂದು ಒಡವೆಗಳನ್ನು ಕಳವು ಮಾಡಿರುವಂತೆ ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

4 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

19 hours ago