ಮನೆ ಬೀರುವಿನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಿಕಿಯಲ್ಲಿದ್ದ ಬೀಗದ ಕೀ ತೆಗೆದುಕೊಂಡು ಡೋರ್ ಓಪನ್ ಮಾಡಿ ಮನೆಯೊಳಗೆ ಒಳಹೊಕ್ಕ ಕಳ್ಳರು 1 ಲಕ್ಷದ 85 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಒಂದು ಚಿನ್ನದ ನೆಕ್ಲೇಸ್, 8 ಗ್ರಾಂ ತೂಕದ ಒಂದು ಕೊರಳ ಚೈನ್, 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಸೇರಿದಂತೆ 5000 ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಅನಂತ್ ಕುಮಾರ್ ಕೆ ಎಂಬುವವರ ಮನೆಯಲ್ಲಿ ನಡೆದಿದೆ.

ಏ.29 ರಂದು ಘಟನೆ ನಡೆದಿದ್ದು, ಎಲ್ಲಾ ಕಡೆ ಹುಡುಕಾಡಿದ ನಂತರ ಒಡವೆಗಳು ಸಿಗದ ಕಾರಣ ತಡವಾಗಿ ಅಂದರೆ ಮೇ.2ರಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ.

ದೂರುದಾರ ಅನಂತ್ ಕುಮಾರ್ ತನ್ನ ಹೆಂಡತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಮನೆಯೊಂದನ್ನು ಲೀಸ್ ಗೆ ಪಡೆದು ವಾಸವಾಗಿದ್ದರು. ಗಂಡ ಹೆಂಡತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಲೀಸ್ ಗೆ ಪಡೆದ ಮನೆಯಲ್ಲಿ ಮನೆಯ ಡೋರ್ ಲಾಕ್ ಕೀಯನ್ನು ಮನೆಯ ಬಾಗಿಲು ಪಕ್ಕದ ಕಿಟಕಿಯಲ್ಲಿ ಇಡುತ್ತಿದ್ದೇವು. ನಾವು ಡೋರ್ ಲಾಕ್ ಮಾಡಿ ಕೀಯನ್ನು ಕಿಟಕಿಯಲ್ಲಿ ಇಡುವ ವಿಚಾರ ಮನೆಯ ಪಕ್ಕದಲ್ಲಿ ವಾಸವಾಗಿರುವ ದೂರುದಾರನ ಚಿಕ್ಕಮ್ಮನ ಮಗಳು ಆಕೆಯ ಗಂಡ ನೋಡಿದ್ದರು. ನಾವು ಮನೆಯಲ್ಲಿ ಇಲ್ಲದೆ ಇರುವಾಗ ಚಿಕ್ಕಮ್ಮನ ಮಗಳು ಆಕೆಯ ಗಂಡ ಕೆಲವು ಬಾರಿ ಮನೆಯ ಫ್ರಿಡ್ಜ್ ನಲ್ಲಿ ತರಕಾರಿ ಇಡುವ ಸಲುವಾಗಿ ಮನೆಯ ಡೋ‌ರ್ ಲಾಕ್ ತೆಗೆದು ಮನೆಯ ಒಳಗೆ ಬಂದು ಹೋಗುತ್ತಿದ್ದರು ಎಂದು ದೂರುದಾರ ಅನಂತ್ ಕುಮಾರ್ ತಿಳಿಸಿದ್ದಾರೆ.

ನಾವು ಒಡವೆಗಳನ್ನು ಮನೆಯಲ್ಲಿನ ಬೀರುವಿನಲ್ಲಿ ಇಡುತ್ತಿದ್ದೆವು ಈ ಒಡವೆಗಳನ್ನು ಮಾ.31 ರಂದು ದೂರುದಾರ ನೋಡಿದ್ದೆವು, ನಂತರ ಏ.29ರಂದು ಸಂಜೆ ಸುಮಾರು 5-00 ಗಂಟೆಯಲ್ಲಿ ಬೀರು ತೆಗೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳ ಪೈಕಿ ಒಂದು ಚಿನ್ನದ ನೆಕ್ಲೇಸ್ – ಸುಮಾರು 10 ಗ್ರಾಂ, ಒಂದು ಕೊರಳ ಚೈನ್-ಸುಮಾರು 8 ಗ್ರಾಂ ಹಾಗೂ ಎರಡು ಚಿನ್ನದ ಉಂಗುರಗಳು – ಸುಮಾರು 5 ಗ್ರಾಂ ಹಾಗೂ 5000 ರೂ. ನಗದು ಹಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಇವುಗಳ ಅಂದಾಜು ಬೆಲೆ ಸುಮಾರು 1,85,000 ರೂಪಾಯಿಗಳು ಆಗಿರುತ್ತದೆ ಎಂದು ಹೇಳಿದ್ದಾರೆ.

ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಡೋರ್ ಲಾಕ್ ಕೀ ಬಳಸಿದ ಕಳ್ಳರು ಮನೆಯೊಳಗೆ ಬಂದು ಒಡವೆಗಳನ್ನು ಕಳವು ಮಾಡಿರುವಂತೆ ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

12 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

12 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

20 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago