ಮನೆ ಬೀರುವಿನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಿಕಿಯಲ್ಲಿದ್ದ ಬೀಗದ ಕೀ ತೆಗೆದುಕೊಂಡು ಡೋರ್ ಓಪನ್ ಮಾಡಿ ಮನೆಯೊಳಗೆ ಒಳಹೊಕ್ಕ ಕಳ್ಳರು 1 ಲಕ್ಷದ 85 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಒಂದು ಚಿನ್ನದ ನೆಕ್ಲೇಸ್, 8 ಗ್ರಾಂ ತೂಕದ ಒಂದು ಕೊರಳ ಚೈನ್, 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಸೇರಿದಂತೆ 5000 ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಅನಂತ್ ಕುಮಾರ್ ಕೆ ಎಂಬುವವರ ಮನೆಯಲ್ಲಿ ನಡೆದಿದೆ.

ಏ.29 ರಂದು ಘಟನೆ ನಡೆದಿದ್ದು, ಎಲ್ಲಾ ಕಡೆ ಹುಡುಕಾಡಿದ ನಂತರ ಒಡವೆಗಳು ಸಿಗದ ಕಾರಣ ತಡವಾಗಿ ಅಂದರೆ ಮೇ.2ರಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ.

ದೂರುದಾರ ಅನಂತ್ ಕುಮಾರ್ ತನ್ನ ಹೆಂಡತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಮನೆಯೊಂದನ್ನು ಲೀಸ್ ಗೆ ಪಡೆದು ವಾಸವಾಗಿದ್ದರು. ಗಂಡ ಹೆಂಡತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಲೀಸ್ ಗೆ ಪಡೆದ ಮನೆಯಲ್ಲಿ ಮನೆಯ ಡೋರ್ ಲಾಕ್ ಕೀಯನ್ನು ಮನೆಯ ಬಾಗಿಲು ಪಕ್ಕದ ಕಿಟಕಿಯಲ್ಲಿ ಇಡುತ್ತಿದ್ದೇವು. ನಾವು ಡೋರ್ ಲಾಕ್ ಮಾಡಿ ಕೀಯನ್ನು ಕಿಟಕಿಯಲ್ಲಿ ಇಡುವ ವಿಚಾರ ಮನೆಯ ಪಕ್ಕದಲ್ಲಿ ವಾಸವಾಗಿರುವ ದೂರುದಾರನ ಚಿಕ್ಕಮ್ಮನ ಮಗಳು ಆಕೆಯ ಗಂಡ ನೋಡಿದ್ದರು. ನಾವು ಮನೆಯಲ್ಲಿ ಇಲ್ಲದೆ ಇರುವಾಗ ಚಿಕ್ಕಮ್ಮನ ಮಗಳು ಆಕೆಯ ಗಂಡ ಕೆಲವು ಬಾರಿ ಮನೆಯ ಫ್ರಿಡ್ಜ್ ನಲ್ಲಿ ತರಕಾರಿ ಇಡುವ ಸಲುವಾಗಿ ಮನೆಯ ಡೋ‌ರ್ ಲಾಕ್ ತೆಗೆದು ಮನೆಯ ಒಳಗೆ ಬಂದು ಹೋಗುತ್ತಿದ್ದರು ಎಂದು ದೂರುದಾರ ಅನಂತ್ ಕುಮಾರ್ ತಿಳಿಸಿದ್ದಾರೆ.

ನಾವು ಒಡವೆಗಳನ್ನು ಮನೆಯಲ್ಲಿನ ಬೀರುವಿನಲ್ಲಿ ಇಡುತ್ತಿದ್ದೆವು ಈ ಒಡವೆಗಳನ್ನು ಮಾ.31 ರಂದು ದೂರುದಾರ ನೋಡಿದ್ದೆವು, ನಂತರ ಏ.29ರಂದು ಸಂಜೆ ಸುಮಾರು 5-00 ಗಂಟೆಯಲ್ಲಿ ಬೀರು ತೆಗೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳ ಪೈಕಿ ಒಂದು ಚಿನ್ನದ ನೆಕ್ಲೇಸ್ – ಸುಮಾರು 10 ಗ್ರಾಂ, ಒಂದು ಕೊರಳ ಚೈನ್-ಸುಮಾರು 8 ಗ್ರಾಂ ಹಾಗೂ ಎರಡು ಚಿನ್ನದ ಉಂಗುರಗಳು – ಸುಮಾರು 5 ಗ್ರಾಂ ಹಾಗೂ 5000 ರೂ. ನಗದು ಹಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಇವುಗಳ ಅಂದಾಜು ಬೆಲೆ ಸುಮಾರು 1,85,000 ರೂಪಾಯಿಗಳು ಆಗಿರುತ್ತದೆ ಎಂದು ಹೇಳಿದ್ದಾರೆ.

ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಡೋರ್ ಲಾಕ್ ಕೀ ಬಳಸಿದ ಕಳ್ಳರು ಮನೆಯೊಳಗೆ ಬಂದು ಒಡವೆಗಳನ್ನು ಕಳವು ಮಾಡಿರುವಂತೆ ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago