ಮನೆ ಬೀರುವಿನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಿಕಿಯಲ್ಲಿದ್ದ ಬೀಗದ ಕೀ ತೆಗೆದುಕೊಂಡು ಡೋರ್ ಓಪನ್ ಮಾಡಿ ಮನೆಯೊಳಗೆ ಒಳಹೊಕ್ಕ ಕಳ್ಳರು 1 ಲಕ್ಷದ 85 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಒಂದು ಚಿನ್ನದ ನೆಕ್ಲೇಸ್, 8 ಗ್ರಾಂ ತೂಕದ ಒಂದು ಕೊರಳ ಚೈನ್, 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಸೇರಿದಂತೆ 5000 ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಅನಂತ್ ಕುಮಾರ್ ಕೆ ಎಂಬುವವರ ಮನೆಯಲ್ಲಿ ನಡೆದಿದೆ.

ಏ.29 ರಂದು ಘಟನೆ ನಡೆದಿದ್ದು, ಎಲ್ಲಾ ಕಡೆ ಹುಡುಕಾಡಿದ ನಂತರ ಒಡವೆಗಳು ಸಿಗದ ಕಾರಣ ತಡವಾಗಿ ಅಂದರೆ ಮೇ.2ರಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ.

ದೂರುದಾರ ಅನಂತ್ ಕುಮಾರ್ ತನ್ನ ಹೆಂಡತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಮನೆಯೊಂದನ್ನು ಲೀಸ್ ಗೆ ಪಡೆದು ವಾಸವಾಗಿದ್ದರು. ಗಂಡ ಹೆಂಡತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಲೀಸ್ ಗೆ ಪಡೆದ ಮನೆಯಲ್ಲಿ ಮನೆಯ ಡೋರ್ ಲಾಕ್ ಕೀಯನ್ನು ಮನೆಯ ಬಾಗಿಲು ಪಕ್ಕದ ಕಿಟಕಿಯಲ್ಲಿ ಇಡುತ್ತಿದ್ದೇವು. ನಾವು ಡೋರ್ ಲಾಕ್ ಮಾಡಿ ಕೀಯನ್ನು ಕಿಟಕಿಯಲ್ಲಿ ಇಡುವ ವಿಚಾರ ಮನೆಯ ಪಕ್ಕದಲ್ಲಿ ವಾಸವಾಗಿರುವ ದೂರುದಾರನ ಚಿಕ್ಕಮ್ಮನ ಮಗಳು ಆಕೆಯ ಗಂಡ ನೋಡಿದ್ದರು. ನಾವು ಮನೆಯಲ್ಲಿ ಇಲ್ಲದೆ ಇರುವಾಗ ಚಿಕ್ಕಮ್ಮನ ಮಗಳು ಆಕೆಯ ಗಂಡ ಕೆಲವು ಬಾರಿ ಮನೆಯ ಫ್ರಿಡ್ಜ್ ನಲ್ಲಿ ತರಕಾರಿ ಇಡುವ ಸಲುವಾಗಿ ಮನೆಯ ಡೋ‌ರ್ ಲಾಕ್ ತೆಗೆದು ಮನೆಯ ಒಳಗೆ ಬಂದು ಹೋಗುತ್ತಿದ್ದರು ಎಂದು ದೂರುದಾರ ಅನಂತ್ ಕುಮಾರ್ ತಿಳಿಸಿದ್ದಾರೆ.

ನಾವು ಒಡವೆಗಳನ್ನು ಮನೆಯಲ್ಲಿನ ಬೀರುವಿನಲ್ಲಿ ಇಡುತ್ತಿದ್ದೆವು ಈ ಒಡವೆಗಳನ್ನು ಮಾ.31 ರಂದು ದೂರುದಾರ ನೋಡಿದ್ದೆವು, ನಂತರ ಏ.29ರಂದು ಸಂಜೆ ಸುಮಾರು 5-00 ಗಂಟೆಯಲ್ಲಿ ಬೀರು ತೆಗೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳ ಪೈಕಿ ಒಂದು ಚಿನ್ನದ ನೆಕ್ಲೇಸ್ – ಸುಮಾರು 10 ಗ್ರಾಂ, ಒಂದು ಕೊರಳ ಚೈನ್-ಸುಮಾರು 8 ಗ್ರಾಂ ಹಾಗೂ ಎರಡು ಚಿನ್ನದ ಉಂಗುರಗಳು – ಸುಮಾರು 5 ಗ್ರಾಂ ಹಾಗೂ 5000 ರೂ. ನಗದು ಹಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಇವುಗಳ ಅಂದಾಜು ಬೆಲೆ ಸುಮಾರು 1,85,000 ರೂಪಾಯಿಗಳು ಆಗಿರುತ್ತದೆ ಎಂದು ಹೇಳಿದ್ದಾರೆ.

ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಡೋರ್ ಲಾಕ್ ಕೀ ಬಳಸಿದ ಕಳ್ಳರು ಮನೆಯೊಳಗೆ ಬಂದು ಒಡವೆಗಳನ್ನು ಕಳವು ಮಾಡಿರುವಂತೆ ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

12 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

18 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

21 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

21 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

24 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago