ಮನೆ ಬೀರುವಿನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಿಕಿಯಲ್ಲಿದ್ದ ಬೀಗದ ಕೀ ತೆಗೆದುಕೊಂಡು ಡೋರ್ ಓಪನ್ ಮಾಡಿ ಮನೆಯೊಳಗೆ ಒಳಹೊಕ್ಕ ಕಳ್ಳರು 1 ಲಕ್ಷದ 85 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಒಂದು ಚಿನ್ನದ ನೆಕ್ಲೇಸ್, 8 ಗ್ರಾಂ ತೂಕದ ಒಂದು ಕೊರಳ ಚೈನ್, 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಸೇರಿದಂತೆ 5000 ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಅನಂತ್ ಕುಮಾರ್ ಕೆ ಎಂಬುವವರ ಮನೆಯಲ್ಲಿ ನಡೆದಿದೆ.

ಏ.29 ರಂದು ಘಟನೆ ನಡೆದಿದ್ದು, ಎಲ್ಲಾ ಕಡೆ ಹುಡುಕಾಡಿದ ನಂತರ ಒಡವೆಗಳು ಸಿಗದ ಕಾರಣ ತಡವಾಗಿ ಅಂದರೆ ಮೇ.2ರಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ.

ದೂರುದಾರ ಅನಂತ್ ಕುಮಾರ್ ತನ್ನ ಹೆಂಡತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ರಂಗಪ್ಪ ಸರ್ಕಲ್ ಬಳಿಯ ರಾಘವೇಂದ್ರ ಸ್ವಾಮಿ ದೇವಸ್ಥಾನದ ಎದರು ಇರುವ ಮನೆಯೊಂದನ್ನು ಲೀಸ್ ಗೆ ಪಡೆದು ವಾಸವಾಗಿದ್ದರು. ಗಂಡ ಹೆಂಡತಿ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಲೀಸ್ ಗೆ ಪಡೆದ ಮನೆಯಲ್ಲಿ ಮನೆಯ ಡೋರ್ ಲಾಕ್ ಕೀಯನ್ನು ಮನೆಯ ಬಾಗಿಲು ಪಕ್ಕದ ಕಿಟಕಿಯಲ್ಲಿ ಇಡುತ್ತಿದ್ದೇವು. ನಾವು ಡೋರ್ ಲಾಕ್ ಮಾಡಿ ಕೀಯನ್ನು ಕಿಟಕಿಯಲ್ಲಿ ಇಡುವ ವಿಚಾರ ಮನೆಯ ಪಕ್ಕದಲ್ಲಿ ವಾಸವಾಗಿರುವ ದೂರುದಾರನ ಚಿಕ್ಕಮ್ಮನ ಮಗಳು ಆಕೆಯ ಗಂಡ ನೋಡಿದ್ದರು. ನಾವು ಮನೆಯಲ್ಲಿ ಇಲ್ಲದೆ ಇರುವಾಗ ಚಿಕ್ಕಮ್ಮನ ಮಗಳು ಆಕೆಯ ಗಂಡ ಕೆಲವು ಬಾರಿ ಮನೆಯ ಫ್ರಿಡ್ಜ್ ನಲ್ಲಿ ತರಕಾರಿ ಇಡುವ ಸಲುವಾಗಿ ಮನೆಯ ಡೋ‌ರ್ ಲಾಕ್ ತೆಗೆದು ಮನೆಯ ಒಳಗೆ ಬಂದು ಹೋಗುತ್ತಿದ್ದರು ಎಂದು ದೂರುದಾರ ಅನಂತ್ ಕುಮಾರ್ ತಿಳಿಸಿದ್ದಾರೆ.

ನಾವು ಒಡವೆಗಳನ್ನು ಮನೆಯಲ್ಲಿನ ಬೀರುವಿನಲ್ಲಿ ಇಡುತ್ತಿದ್ದೆವು ಈ ಒಡವೆಗಳನ್ನು ಮಾ.31 ರಂದು ದೂರುದಾರ ನೋಡಿದ್ದೆವು, ನಂತರ ಏ.29ರಂದು ಸಂಜೆ ಸುಮಾರು 5-00 ಗಂಟೆಯಲ್ಲಿ ಬೀರು ತೆಗೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳ ಪೈಕಿ ಒಂದು ಚಿನ್ನದ ನೆಕ್ಲೇಸ್ – ಸುಮಾರು 10 ಗ್ರಾಂ, ಒಂದು ಕೊರಳ ಚೈನ್-ಸುಮಾರು 8 ಗ್ರಾಂ ಹಾಗೂ ಎರಡು ಚಿನ್ನದ ಉಂಗುರಗಳು – ಸುಮಾರು 5 ಗ್ರಾಂ ಹಾಗೂ 5000 ರೂ. ನಗದು ಹಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಇವುಗಳ ಅಂದಾಜು ಬೆಲೆ ಸುಮಾರು 1,85,000 ರೂಪಾಯಿಗಳು ಆಗಿರುತ್ತದೆ ಎಂದು ಹೇಳಿದ್ದಾರೆ.

ಮನೆಯ ಕಿಟಕಿಯಲ್ಲಿ ಇಟ್ಟಿದ್ದ ಡೋರ್ ಲಾಕ್ ಕೀ ಬಳಸಿದ ಕಳ್ಳರು ಮನೆಯೊಳಗೆ ಬಂದು ಒಡವೆಗಳನ್ನು ಕಳವು ಮಾಡಿರುವಂತೆ ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

23 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

1 day ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

1 day ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago