ಮನೆ ಮಗಳಂತೆ ಮುದ್ದಾಗಿ ಸಾಕಿದ್ದ ನಾಯಿಯ ಕೊಲೆಗೆ ಯತ್ನಿಸಿದ ಕಿರಾತಕ: ನಾಯಿ ಮೇಲೆ ಮಚ್ಚು ಬೀಸಿ ವಿಕೃತಿ ಮೆರೆದ ವ್ಯಕ್ತಿ: ಮಚ್ಚಿನೇಟಿಗೆ 12 ಹೊಲಿಗೆ: ಕಣ್ಣೀರಲ್ಲಿ ಮುಳುಗಿದ ಮಹಿಳೆ

ಆಕೆಯ ಮನೆಯಲ್ಲಿ‌ ಹೆಣ್ಣು ಮಗಳಿಲ್ಲ ಎಂಬ ಚಿಂತೆ. ಆ ಚಿಂತೆ ಹೋಗಲಾಡಸಲು ಎಂದು ಒಂದು ಹೆಣ್ಣು ನಾಯಿಯನ್ನು ತಂದು ಪ್ರೀತಿಯಿಂದ ಸಾಕಿದ್ದಳು. ಆದರೆ ಆ ನಾಯಿ ಮೇಲೆ ಆ ಗ್ರಾಮದ ಯುವಕನೊಬ್ಬನಿಗೆ ಅದೇನ್ ಕೋಪ ಇತ್ತೋ ಏನೋ. ನಾಯಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಬೆಂಗಳೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕಾರಣ ಏನು ಅಂತಿರಾ , ಈ ಸ್ಟೋರಿ ಓದಿ…………

ಹೌದು ಹೀಗೆ ಕಾರಲ್ಲಿ ಗಾಯವಾಗಿರುವ ಜಾಗದಲ್ಲಿ ಹೊಲಿಗೆ‌‌ ಹಾಕಿಸಿಕೊಂಡು ಮಲಗಿರುವ ನಾಯಿ, ನಾಯಿಯ ಸ್ಥಿತಿಯನ್ನು ನೋಡಿ ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚಿನ್ನಕೆಂಪನಹಳ್ಳಿ ಗ್ರಾಮದಲ್ಲಿ.

ಈ ಫೊಟೋದಲ್ಲಿ ಕತ್ತಿಗೆ ಹೂವಿನ ಹಾರ ಹಾಕಿಕೊಂಡಿರುವ ಮೋಹನ್ ಇದೇ ಗ್ರಾಮದವನು. ಈತನೇ ನಾಯಿಯ ಮೇಲೆ ಮಚ್ಚು ಬೀಸಿ ಕೊಲೆಗೆ ಮುಂದಾಗಿರುವ ವಿಕೃತ ಮನಸ್ಸಿನ ವ್ಯಕ್ತಿ ಎಂದು ಆರೋಪಿಸಲಾಗಿದೆ. ಇದೇ ಗ್ರಾಮದ ಶೈಲಜಾ ಎಂಬ ಮಹಿಳೆ ತನಗೆ ಹೆಣ್ಣು ಮಗಳಿಲ್ಲ ಎಂಬ ಕಾರಣಕ್ಕೆ ಎರಡು ವರ್ಷಗಳಿಂದ ಹೆಣ್ಣು ನಾಯಿಯನ್ನು ತನ್ನ ಮಗಳಂತೆ ಪ್ರೀತಿಯಿಂದ ಸಾಕಿಕೊಂಡಿದ್ದಳು. ಆದರೆ ಆ ನಾಯಿಗೆ ಮೋಹನ್ ಎಂಬ ವ್ಯಕ್ತಿ ಮಚ್ಚು ಬೀಸಿದ್ದಾನೆ ಎಂದು‌ ದೂರಲಾಗಿದೆ. ಇದರಿಂದ‌‌‌ ಗಾಯಾಳು‌ ನಾಯಿಗೆ 12 ಹೊಲಿಗೆ ಬಿದ್ದಿವೆ.

ಇನ್ನೂ ಶೈಲಜಾ ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಅಡುಗೆ ತಯಾರಿಕೆ ಕೆಲಸ ಮಾಡುತ್ತಿದ್ದಳು. ಹಾಗಾಗಿ ಎಂದಿನಂತೆ ಕೆಲಸಕ್ಕೆ ಹೋಗಿದ್ದಾಳೆ. ಅಕೆ ಪ್ರತಿನಿತ್ಯ ಹೋಗುತ್ತಿದ್ದ ಶಾಲೆಯ ಬಳಿ ನಾಯಿ ಕೂಡ ಹೋಗಿದೆ. ಆದರೆ ವಿಕೃತ ಮನಸ್ಸಿನ ಮೋಹನ್ ಕೂಡ ಶಾಲೆಯ ಆವರಣಕ್ಕೆ ಹೋಗಿದ್ದಾನೆ. ಈ ವೇಳೆ ಕೈಯಲ್ಲಿದ್ದ ಮಚ್ಚಿನಿಂದ ನಾಯಿಯ ಸೊಂಟದ ಭಾಗಕ್ಕೆ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಮಚ್ಚಿನ ಏಟಿಗೆ ಗಾಯಗೊಂಡ ನಾಯಿ ಮನೆಯ ಬಳಿಗೆ ಓಡಿ ಹೋಗಿದೆ. ಘಟನೆ ಶಾಲಾ ಆವರಣದಲ್ಲಿ ನಡೆದಿದ್ದು, ಎಲ್ಲಾ ವಿಧ್ಯಾರ್ಥಿಗಳು ಶಾಲೆಯ ಒಳಗೆ ಇದ್ದ ಪರಿಣಾಮ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಒಟ್ಟಾರೆ, ನಮ್ಮ ಮನೆಯ ಬಳಿ ಇದ್ದ ಕೋಳಿಯನ್ನು ತಿಂದಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ಈ ರೀತಿ ವಿಕೃತಿ ಮೆರೆದಿರುವುದು ಮಾತ್ರ ವಿಪರ್ಯಾಸ. ಈತನಿಗೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಗ್ರಾನಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

7 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

11 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

15 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago