ಆಕೆಯ ಮನೆಯಲ್ಲಿ ಹೆಣ್ಣು ಮಗಳಿಲ್ಲ ಎಂಬ ಚಿಂತೆ. ಆ ಚಿಂತೆ ಹೋಗಲಾಡಸಲು ಎಂದು ಒಂದು ಹೆಣ್ಣು ನಾಯಿಯನ್ನು ತಂದು ಪ್ರೀತಿಯಿಂದ ಸಾಕಿದ್ದಳು. ಆದರೆ ಆ ನಾಯಿ ಮೇಲೆ ಆ ಗ್ರಾಮದ ಯುವಕನೊಬ್ಬನಿಗೆ ಅದೇನ್ ಕೋಪ ಇತ್ತೋ ಏನೋ. ನಾಯಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಬೆಂಗಳೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕಾರಣ ಏನು ಅಂತಿರಾ , ಈ ಸ್ಟೋರಿ ಓದಿ…………
ಹೌದು ಹೀಗೆ ಕಾರಲ್ಲಿ ಗಾಯವಾಗಿರುವ ಜಾಗದಲ್ಲಿ ಹೊಲಿಗೆ ಹಾಕಿಸಿಕೊಂಡು ಮಲಗಿರುವ ನಾಯಿ, ನಾಯಿಯ ಸ್ಥಿತಿಯನ್ನು ನೋಡಿ ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚಿನ್ನಕೆಂಪನಹಳ್ಳಿ ಗ್ರಾಮದಲ್ಲಿ.
ಈ ಫೊಟೋದಲ್ಲಿ ಕತ್ತಿಗೆ ಹೂವಿನ ಹಾರ ಹಾಕಿಕೊಂಡಿರುವ ಮೋಹನ್ ಇದೇ ಗ್ರಾಮದವನು. ಈತನೇ ನಾಯಿಯ ಮೇಲೆ ಮಚ್ಚು ಬೀಸಿ ಕೊಲೆಗೆ ಮುಂದಾಗಿರುವ ವಿಕೃತ ಮನಸ್ಸಿನ ವ್ಯಕ್ತಿ ಎಂದು ಆರೋಪಿಸಲಾಗಿದೆ. ಇದೇ ಗ್ರಾಮದ ಶೈಲಜಾ ಎಂಬ ಮಹಿಳೆ ತನಗೆ ಹೆಣ್ಣು ಮಗಳಿಲ್ಲ ಎಂಬ ಕಾರಣಕ್ಕೆ ಎರಡು ವರ್ಷಗಳಿಂದ ಹೆಣ್ಣು ನಾಯಿಯನ್ನು ತನ್ನ ಮಗಳಂತೆ ಪ್ರೀತಿಯಿಂದ ಸಾಕಿಕೊಂಡಿದ್ದಳು. ಆದರೆ ಆ ನಾಯಿಗೆ ಮೋಹನ್ ಎಂಬ ವ್ಯಕ್ತಿ ಮಚ್ಚು ಬೀಸಿದ್ದಾನೆ ಎಂದು ದೂರಲಾಗಿದೆ. ಇದರಿಂದ ಗಾಯಾಳು ನಾಯಿಗೆ 12 ಹೊಲಿಗೆ ಬಿದ್ದಿವೆ.
ಇನ್ನೂ ಶೈಲಜಾ ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಅಡುಗೆ ತಯಾರಿಕೆ ಕೆಲಸ ಮಾಡುತ್ತಿದ್ದಳು. ಹಾಗಾಗಿ ಎಂದಿನಂತೆ ಕೆಲಸಕ್ಕೆ ಹೋಗಿದ್ದಾಳೆ. ಅಕೆ ಪ್ರತಿನಿತ್ಯ ಹೋಗುತ್ತಿದ್ದ ಶಾಲೆಯ ಬಳಿ ನಾಯಿ ಕೂಡ ಹೋಗಿದೆ. ಆದರೆ ವಿಕೃತ ಮನಸ್ಸಿನ ಮೋಹನ್ ಕೂಡ ಶಾಲೆಯ ಆವರಣಕ್ಕೆ ಹೋಗಿದ್ದಾನೆ. ಈ ವೇಳೆ ಕೈಯಲ್ಲಿದ್ದ ಮಚ್ಚಿನಿಂದ ನಾಯಿಯ ಸೊಂಟದ ಭಾಗಕ್ಕೆ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಮಚ್ಚಿನ ಏಟಿಗೆ ಗಾಯಗೊಂಡ ನಾಯಿ ಮನೆಯ ಬಳಿಗೆ ಓಡಿ ಹೋಗಿದೆ. ಘಟನೆ ಶಾಲಾ ಆವರಣದಲ್ಲಿ ನಡೆದಿದ್ದು, ಎಲ್ಲಾ ವಿಧ್ಯಾರ್ಥಿಗಳು ಶಾಲೆಯ ಒಳಗೆ ಇದ್ದ ಪರಿಣಾಮ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಒಟ್ಟಾರೆ, ನಮ್ಮ ಮನೆಯ ಬಳಿ ಇದ್ದ ಕೋಳಿಯನ್ನು ತಿಂದಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ಈ ರೀತಿ ವಿಕೃತಿ ಮೆರೆದಿರುವುದು ಮಾತ್ರ ವಿಪರ್ಯಾಸ. ಈತನಿಗೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಗ್ರಾನಸ್ಥರು ಆಗ್ರಹಿಸುತ್ತಿದ್ದಾರೆ.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…