ಮನೆ ಮಗಳಂತೆ ಮುದ್ದಾಗಿ ಸಾಕಿದ್ದ ನಾಯಿಯ ಕೊಲೆಗೆ ಯತ್ನಿಸಿದ ಕಿರಾತಕ: ನಾಯಿ ಮೇಲೆ ಮಚ್ಚು ಬೀಸಿ ವಿಕೃತಿ ಮೆರೆದ ವ್ಯಕ್ತಿ: ಮಚ್ಚಿನೇಟಿಗೆ 12 ಹೊಲಿಗೆ: ಕಣ್ಣೀರಲ್ಲಿ ಮುಳುಗಿದ ಮಹಿಳೆ

ಆಕೆಯ ಮನೆಯಲ್ಲಿ‌ ಹೆಣ್ಣು ಮಗಳಿಲ್ಲ ಎಂಬ ಚಿಂತೆ. ಆ ಚಿಂತೆ ಹೋಗಲಾಡಸಲು ಎಂದು ಒಂದು ಹೆಣ್ಣು ನಾಯಿಯನ್ನು ತಂದು ಪ್ರೀತಿಯಿಂದ ಸಾಕಿದ್ದಳು. ಆದರೆ ಆ ನಾಯಿ ಮೇಲೆ ಆ ಗ್ರಾಮದ ಯುವಕನೊಬ್ಬನಿಗೆ ಅದೇನ್ ಕೋಪ ಇತ್ತೋ ಏನೋ. ನಾಯಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಬೆಂಗಳೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕಾರಣ ಏನು ಅಂತಿರಾ , ಈ ಸ್ಟೋರಿ ಓದಿ…………

ಹೌದು ಹೀಗೆ ಕಾರಲ್ಲಿ ಗಾಯವಾಗಿರುವ ಜಾಗದಲ್ಲಿ ಹೊಲಿಗೆ‌‌ ಹಾಕಿಸಿಕೊಂಡು ಮಲಗಿರುವ ನಾಯಿ, ನಾಯಿಯ ಸ್ಥಿತಿಯನ್ನು ನೋಡಿ ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚಿನ್ನಕೆಂಪನಹಳ್ಳಿ ಗ್ರಾಮದಲ್ಲಿ.

ಈ ಫೊಟೋದಲ್ಲಿ ಕತ್ತಿಗೆ ಹೂವಿನ ಹಾರ ಹಾಕಿಕೊಂಡಿರುವ ಮೋಹನ್ ಇದೇ ಗ್ರಾಮದವನು. ಈತನೇ ನಾಯಿಯ ಮೇಲೆ ಮಚ್ಚು ಬೀಸಿ ಕೊಲೆಗೆ ಮುಂದಾಗಿರುವ ವಿಕೃತ ಮನಸ್ಸಿನ ವ್ಯಕ್ತಿ ಎಂದು ಆರೋಪಿಸಲಾಗಿದೆ. ಇದೇ ಗ್ರಾಮದ ಶೈಲಜಾ ಎಂಬ ಮಹಿಳೆ ತನಗೆ ಹೆಣ್ಣು ಮಗಳಿಲ್ಲ ಎಂಬ ಕಾರಣಕ್ಕೆ ಎರಡು ವರ್ಷಗಳಿಂದ ಹೆಣ್ಣು ನಾಯಿಯನ್ನು ತನ್ನ ಮಗಳಂತೆ ಪ್ರೀತಿಯಿಂದ ಸಾಕಿಕೊಂಡಿದ್ದಳು. ಆದರೆ ಆ ನಾಯಿಗೆ ಮೋಹನ್ ಎಂಬ ವ್ಯಕ್ತಿ ಮಚ್ಚು ಬೀಸಿದ್ದಾನೆ ಎಂದು‌ ದೂರಲಾಗಿದೆ. ಇದರಿಂದ‌‌‌ ಗಾಯಾಳು‌ ನಾಯಿಗೆ 12 ಹೊಲಿಗೆ ಬಿದ್ದಿವೆ.

ಇನ್ನೂ ಶೈಲಜಾ ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಅಡುಗೆ ತಯಾರಿಕೆ ಕೆಲಸ ಮಾಡುತ್ತಿದ್ದಳು. ಹಾಗಾಗಿ ಎಂದಿನಂತೆ ಕೆಲಸಕ್ಕೆ ಹೋಗಿದ್ದಾಳೆ. ಅಕೆ ಪ್ರತಿನಿತ್ಯ ಹೋಗುತ್ತಿದ್ದ ಶಾಲೆಯ ಬಳಿ ನಾಯಿ ಕೂಡ ಹೋಗಿದೆ. ಆದರೆ ವಿಕೃತ ಮನಸ್ಸಿನ ಮೋಹನ್ ಕೂಡ ಶಾಲೆಯ ಆವರಣಕ್ಕೆ ಹೋಗಿದ್ದಾನೆ. ಈ ವೇಳೆ ಕೈಯಲ್ಲಿದ್ದ ಮಚ್ಚಿನಿಂದ ನಾಯಿಯ ಸೊಂಟದ ಭಾಗಕ್ಕೆ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಮಚ್ಚಿನ ಏಟಿಗೆ ಗಾಯಗೊಂಡ ನಾಯಿ ಮನೆಯ ಬಳಿಗೆ ಓಡಿ ಹೋಗಿದೆ. ಘಟನೆ ಶಾಲಾ ಆವರಣದಲ್ಲಿ ನಡೆದಿದ್ದು, ಎಲ್ಲಾ ವಿಧ್ಯಾರ್ಥಿಗಳು ಶಾಲೆಯ ಒಳಗೆ ಇದ್ದ ಪರಿಣಾಮ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಒಟ್ಟಾರೆ, ನಮ್ಮ ಮನೆಯ ಬಳಿ ಇದ್ದ ಕೋಳಿಯನ್ನು ತಿಂದಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ಈ ರೀತಿ ವಿಕೃತಿ ಮೆರೆದಿರುವುದು ಮಾತ್ರ ವಿಪರ್ಯಾಸ. ಈತನಿಗೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಗ್ರಾನಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

10 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago