ಮನೆ ಮಗಳಂತೆ ಮುದ್ದಾಗಿ ಸಾಕಿದ್ದ ನಾಯಿಯ ಕೊಲೆಗೆ ಯತ್ನಿಸಿದ ಕಿರಾತಕ: ನಾಯಿ ಮೇಲೆ ಮಚ್ಚು ಬೀಸಿ ವಿಕೃತಿ ಮೆರೆದ ವ್ಯಕ್ತಿ: ಮಚ್ಚಿನೇಟಿಗೆ 12 ಹೊಲಿಗೆ: ಕಣ್ಣೀರಲ್ಲಿ ಮುಳುಗಿದ ಮಹಿಳೆ

ಆಕೆಯ ಮನೆಯಲ್ಲಿ‌ ಹೆಣ್ಣು ಮಗಳಿಲ್ಲ ಎಂಬ ಚಿಂತೆ. ಆ ಚಿಂತೆ ಹೋಗಲಾಡಸಲು ಎಂದು ಒಂದು ಹೆಣ್ಣು ನಾಯಿಯನ್ನು ತಂದು ಪ್ರೀತಿಯಿಂದ ಸಾಕಿದ್ದಳು. ಆದರೆ ಆ ನಾಯಿ ಮೇಲೆ ಆ ಗ್ರಾಮದ ಯುವಕನೊಬ್ಬನಿಗೆ ಅದೇನ್ ಕೋಪ ಇತ್ತೋ ಏನೋ. ನಾಯಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಬೆಂಗಳೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕಾರಣ ಏನು ಅಂತಿರಾ , ಈ ಸ್ಟೋರಿ ಓದಿ…………

ಹೌದು ಹೀಗೆ ಕಾರಲ್ಲಿ ಗಾಯವಾಗಿರುವ ಜಾಗದಲ್ಲಿ ಹೊಲಿಗೆ‌‌ ಹಾಕಿಸಿಕೊಂಡು ಮಲಗಿರುವ ನಾಯಿ, ನಾಯಿಯ ಸ್ಥಿತಿಯನ್ನು ನೋಡಿ ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚಿನ್ನಕೆಂಪನಹಳ್ಳಿ ಗ್ರಾಮದಲ್ಲಿ.

ಈ ಫೊಟೋದಲ್ಲಿ ಕತ್ತಿಗೆ ಹೂವಿನ ಹಾರ ಹಾಕಿಕೊಂಡಿರುವ ಮೋಹನ್ ಇದೇ ಗ್ರಾಮದವನು. ಈತನೇ ನಾಯಿಯ ಮೇಲೆ ಮಚ್ಚು ಬೀಸಿ ಕೊಲೆಗೆ ಮುಂದಾಗಿರುವ ವಿಕೃತ ಮನಸ್ಸಿನ ವ್ಯಕ್ತಿ ಎಂದು ಆರೋಪಿಸಲಾಗಿದೆ. ಇದೇ ಗ್ರಾಮದ ಶೈಲಜಾ ಎಂಬ ಮಹಿಳೆ ತನಗೆ ಹೆಣ್ಣು ಮಗಳಿಲ್ಲ ಎಂಬ ಕಾರಣಕ್ಕೆ ಎರಡು ವರ್ಷಗಳಿಂದ ಹೆಣ್ಣು ನಾಯಿಯನ್ನು ತನ್ನ ಮಗಳಂತೆ ಪ್ರೀತಿಯಿಂದ ಸಾಕಿಕೊಂಡಿದ್ದಳು. ಆದರೆ ಆ ನಾಯಿಗೆ ಮೋಹನ್ ಎಂಬ ವ್ಯಕ್ತಿ ಮಚ್ಚು ಬೀಸಿದ್ದಾನೆ ಎಂದು‌ ದೂರಲಾಗಿದೆ. ಇದರಿಂದ‌‌‌ ಗಾಯಾಳು‌ ನಾಯಿಗೆ 12 ಹೊಲಿಗೆ ಬಿದ್ದಿವೆ.

ಇನ್ನೂ ಶೈಲಜಾ ಗ್ರಾಮದ ಶಾಲೆಯಲ್ಲಿ ಬಿಸಿಯೂಟ ಅಡುಗೆ ತಯಾರಿಕೆ ಕೆಲಸ ಮಾಡುತ್ತಿದ್ದಳು. ಹಾಗಾಗಿ ಎಂದಿನಂತೆ ಕೆಲಸಕ್ಕೆ ಹೋಗಿದ್ದಾಳೆ. ಅಕೆ ಪ್ರತಿನಿತ್ಯ ಹೋಗುತ್ತಿದ್ದ ಶಾಲೆಯ ಬಳಿ ನಾಯಿ ಕೂಡ ಹೋಗಿದೆ. ಆದರೆ ವಿಕೃತ ಮನಸ್ಸಿನ ಮೋಹನ್ ಕೂಡ ಶಾಲೆಯ ಆವರಣಕ್ಕೆ ಹೋಗಿದ್ದಾನೆ. ಈ ವೇಳೆ ಕೈಯಲ್ಲಿದ್ದ ಮಚ್ಚಿನಿಂದ ನಾಯಿಯ ಸೊಂಟದ ಭಾಗಕ್ಕೆ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಮಚ್ಚಿನ ಏಟಿಗೆ ಗಾಯಗೊಂಡ ನಾಯಿ ಮನೆಯ ಬಳಿಗೆ ಓಡಿ ಹೋಗಿದೆ. ಘಟನೆ ಶಾಲಾ ಆವರಣದಲ್ಲಿ ನಡೆದಿದ್ದು, ಎಲ್ಲಾ ವಿಧ್ಯಾರ್ಥಿಗಳು ಶಾಲೆಯ ಒಳಗೆ ಇದ್ದ ಪರಿಣಾಮ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಒಟ್ಟಾರೆ, ನಮ್ಮ ಮನೆಯ ಬಳಿ ಇದ್ದ ಕೋಳಿಯನ್ನು ತಿಂದಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ಈ ರೀತಿ ವಿಕೃತಿ ಮೆರೆದಿರುವುದು ಮಾತ್ರ ವಿಪರ್ಯಾಸ. ಈತನಿಗೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಗ್ರಾನಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

53 minutes ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

10 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

20 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

21 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago