ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.
ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ. ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…