ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕದ್ದ ಕಳ್ಳರು: ಕದ್ದ ಬೈಕನ್ನು ಸುಟ್ಟುಭಸ್ಮ ಮಾಡಿದ ಖದೀಮರು

ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.

ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ‌ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ.‌ ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

3 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

6 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

6 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

19 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

20 hours ago