ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.
ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ. ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…