ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕದ್ದ ಕಳ್ಳರು: ಕದ್ದ ಬೈಕನ್ನು ಸುಟ್ಟುಭಸ್ಮ ಮಾಡಿದ ಖದೀಮರು

ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.

ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ‌ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ.‌ ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

2 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

20 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

24 hours ago