ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.
ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ. ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…