ಮನೆ ಮುಂದೆ ನಿಲ್ಲಿಸಿದ ಬೈಕ್ ನ್ನು ರಾತ್ರೋರಾತ್ರಿ ಕಳವು ಮಾಡಿದ ಕಳ್ಳರು, ಕಳವು ಮಾಡಿದ ಬೈಕ್ ಅನ್ನು ಸುಟ್ಟು ಹಾಕಿರುವ ವಿಚಿತ್ರ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೀರನಯ್ಯನಪಾಳ್ಯದ ಗೌಡನ ಕೆರೆ ಬಳಿ ಘಟನೆ ನಡೆದಿದೆ.
ಬೀರನಯ್ಯನಪಾಳ್ಯ ಗ್ರಾಮದ ರಮೇಶ್ ಎಂಬುವರ ಬೈಕ್ ಅನ್ನು ಕಳುವ ಮಾಡಿರುವ ಕಳ್ಳರು, ಕದ್ದ ಬೈಕ್ ಅನ್ನು ಗ್ರಾಮದ ಹೊರಗಿನ ಗೌಡನಕೆರೆ ಬಳಿ ಸುಟ್ಟು ಹಾಕಿದ್ದಾರೆ. ಘಟನೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ನಮ್ಮ ಗ್ರಾಮದಲ್ಲಿ ಕೋಳಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಂಡಿರುತ್ತೇನೆ. ನನ್ನ ದಿನನಿತ್ಯದ ಓಡಾಟಕ್ಕೆ, ವ್ಯಾಪಾರಕ್ಕೆ ನೀಲಿ ಬಣ್ಣದ ಬಜಾಜ್ ಡಿಸ್ಕವರ್ ಮೋಟರ್ ಸೈಕಲ್ ಅನ್ನು ಹೊಂದಿರುತ್ತೇನೆ. ಡಿ.6ರಂದು ನಾನು ಎಂದಿನಂತೆ ಕೋಳಿ ವ್ಯಾಪಾರ ಮಾಡಿಕೊಂಡು ರಾತ್ರಿ 10 ಗಂಟೆಯಲ್ಲಿ ಮನೆಗೆ ಬಂದು ಡಿಸ್ಕವರ್ ಮೋಟರ್ ಸೈಕಲ್ ಅನ್ನು ನಮ್ಮ ಮನೆಯ ಮುಂದೆ ನಿಲ್ಲಿಸಿ ಸೈಡ್ ಲಾಕ್ ಮಾಡಿಕೊಂಡು ಮನೆಯಲ್ಲಿ ಮಲಗಿಕೊಂಡೆ. ನಂತರ ಡಿ.7ರಂದು ಬೆಳಿಗ್ಗೆ 5 ಗಂಟೆಗೆ ಮಾಮೂಲಿನಂತೆ ವ್ಯಾಪಾರಕ್ಕೆ ಹೋಗಲು ಮನೆಯಿಂದ ಈಚೆ ಬಂದು ನನ್ನ ಗಾಡಿಯನ್ನು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಕಾಣಲಿಲ್ಲ. ನಾನು ಗಾಬರಿಯಲ್ಲಿ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದೆನು. ಗ್ರಾಮದಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ನನ್ನ ಮೋಟರ್ ಸೈಕಲ್ ಕಾಣಲಿಲ್ಲ. ನಾನು ಗಾಬರಿಯಿಂದ ಹುಡುಕುತ್ತಿದ್ದಾಗ ನಮ್ಮ ಸಂಬಂಧಿಕರೊಬ್ಬರು ನನಗೆ ಫೋನ್ ಮಾಡಿ ನಿನ್ನ ಗಾಡಿಯನ್ನು ಕೆರೆಯಲ್ಲಿ ಯಾರೋ ಬೆಂಕಿ ಹಾಕಿ ಸುಟ್ಟು ಹಾಕಿರುತ್ತಾರೆ. ಕೂಡಲೇ ಕೆರೆಯ ಹತ್ತಿರ ಬಾ ಎಂದು ತಿಳಿಸುತ್ತಾರೆ. ತಕ್ಷಣ ನಾನು ನಮ್ಮೂರಿನ ಪಕ್ಕದಲ್ಲಿರುವ ಗೌಡನ ಕೆರೆಯ ಹತ್ತಿರ ಹೋಗಿ ನೋಡಿದಾಗ ರಸ್ತೆಯಿಂದ ಸುಮಾರು 300 ಮೀಟರ್ ಕೆರೆಯ ಒಳಗೆ ನನ್ನ ಬೈಕಿಗೆ ಯಾರೋ ಬೆಂಕಿ ಇಟ್ಟು ಸುಟ್ಟು ಹಾಕಿರುತ್ತಾರೆ. ಬೆಂಕಿಯ ಕೆನ್ನಾಲಿಗೆಗೆ ನನ್ನ ಬೈಕ್ ಸಂಪೂರ್ಣ ಸುಟ್ಟು ಹೋಗಿರುತ್ತೆ. ನನ್ನ ಬೈಕಿನ ಹಿಂಭಾಗದ ಚಕ್ರವನ್ನು ಬಿಚ್ಚಿಕೊಂಡು ಹೋಗಿರುತ್ತಾರೆ ಎಂದು ರಮೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…