ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.
ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.
ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…