ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.
ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.
ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…