ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.
ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.
ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…