Categories: ಕೋಲಾರ

ಮನ್ ಕಿ ಬಾತ್ ನೇರ ಪ್ರಸಾರ ಕಾರ್ಯಕ್ರಮ: ಬಿಜೆಪಿ ಜೆಡಿಎಸ್‌ ನಾಯಕರು ಭಾಗಿ

ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.

ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.

ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago