Categories: ಕೋಲಾರ

ಮನ್ ಕಿ ಬಾತ್ ನೇರ ಪ್ರಸಾರ ಕಾರ್ಯಕ್ರಮ: ಬಿಜೆಪಿ ಜೆಡಿಎಸ್‌ ನಾಯಕರು ಭಾಗಿ

ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.

ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.

ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 hours ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

7 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago