Categories: ಲೇಖನ

ಮನ – ಮನೆ – ಮನಸ್ಸಿನ ವಾತಾವರಣ ಆರೋಗ್ಯಕರವಾಗಿರಲಿ…

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ ಮರೆಯಾಗಿ, ಕೃಷಿ ಕ್ಷೇತ್ರ ಒಂದಷ್ಟು ಉತ್ತಮ ಬೆಳವಣಿಗೆ ಕಾಣುತ್ತದೆ. ಇದು ರೈತರ ಮತ್ತು ಕೃಷಿ ಅವಲಂಬಿತರ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಅಸಂಖ್ಯಾತ ಜನ ಮತ್ತು ಸರ್ಕಾರದ ಹಿತ ದೃಷ್ಟಿಯಿಂದ ಅತ್ಯುತ್ತಮ ಬೆಳವಣಿಗೆ….

ನಿಜವಾಗಲೂ ಇಡೀ ಆಡಳಿತ ವ್ಯವಸ್ಥೆ ಮತ್ತು ಅದಕ್ಕೆ ಪೂರಕವಾದ ಎಲ್ಲಾ ಕ್ಷೇತ್ರಗಳು ಈ ಬಗ್ಗೆ ಸಾಕಷ್ಟು ಗಮನಹರಿಸಿ ಒಳ್ಳೆಯ ಕೆಲಸ ಮಾಡಬೇಕಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಹಾಗು ಹಣಕಾಸು ಸಾಲ ಸೌಲಭ್ಯಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಿದೆ. ಆದರೆ ದುರಾದೃಷ್ಟವಶಾತ್ ಕಳೆದ ಕೆಲವು ವಾರಗಳಿಂದ ಚುನಾವಣಾ ರಾಜಕೀಯ, ತದನಂತರದಲ್ಲಿ ನೇಹಾ ಕೊಲೆ, ಪ್ರಜ್ವಲ್ ವಿಕೃತ ಕಾಮ, ದರ್ಶನ್ ಕ್ರೌರ್ಯ, ಈಗ ಯಡಿಯೂರಪ್ಪನವರ ಫೋಕ್ಸೋ ಹೀಗೆ ಆಡಳಿತ, ಮಾಧ್ಯಮ ಮತ್ತು ಜನರ ಮನಸ್ಸಿನಲ್ಲಿ ಬಹುತೇಕ ಇದೇ ವಿಷಯ ತಲೆಯಲ್ಲಿ ತುಂಬಿಕೊಂಡಿದೆ……..

ಎಲೆಕ್ಟ್ರಾನಿಕ್ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಯಾವ ವಿಷಯ ಬ್ರೇಕಿಂಗ್ ನ್ಯೂಸ್ ಮತ್ತು ಲೀಡ್ ಆಗುತ್ತದೆಯೋ ಅದು ಹೆಚ್ಚು ವ್ಯಾಪಕವಾಗಿ ಜನರ ಮನಸ್ಸಿನಲ್ಲಿ ಸುಳಿದಾಡುತ್ತಿರುತ್ತದೆ. ಬೆಳಗಿನ ವಾಯುವಿಹಾರವೇ ಇರಲಿ, ಹೋಟೆಲ್ಗಳೇ ಇರಲಿ, ವಿಶ್ರಾಂತಿ ಮತ್ತು ಹರಟೆ ಕಟ್ಟೆಗಳೇ ಇರಲಿ, ಮೊಬೈಲಿನ ಆತ್ಮೀಯ ಜೊತೆಗಾರೇ ಇರಲಿ ಎಲ್ಲಾ ಕಡೆಯೂ ಈ ವಿಷಯಗಳೇ ಪ್ರಮುಖವಾಗಿ ಸ್ಥಾನ ಪಡೆದು ನಿಜಕ್ಕೂ ಅಭಿವೃದ್ದಿಯ, ನೆಮ್ಮದಿಯ ಮೂಲ ವಿಷಯಗಳು ಮೂಲೆಗುಂಪಾಗುತ್ತವೆ…..

ಈ ಸಮಾಜದಲ್ಲಿ, ಆಡಳಿತದಲ್ಲಿ, ಮಾಧ್ಯಮಗಳಲ್ಲಿ, ಜನರ ಮನಸ್ಸಿನಲ್ಲಿ, ಯಾವ ವಿಷಯ ಹೆಚ್ಚು ಪ್ರಾಮುಖ್ಯತೆ ಪಡೆಯಬೇಕು, ಯಾವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಆಗಬೇಕು, ಯಾವ ದೃಷ್ಟಿಕೋನದಿಂದ ಅಭಿವೃದ್ಧಿ ಹೊಂದಬೇಕು ಈ ವಿಷಯಗಳು ಹೆಚ್ಚು ಹೆಚ್ಚು ಸಾರ್ವಜನಿಕ ಚರ್ಚೆಗೆ ಬರದೇ, ಈ ರೀತಿಯ ಕೆಲವು ಪ್ರಖ್ಯಾತ ವ್ಯಕ್ತಿಗಳ ದುಷ್ಕೃತ್ಯಗಳೇ ಮುಖ್ಯ ವಾಹಿನಿಯಲ್ಲಿ ಹರಿದಾಡುವಾಗ ಯುವ ಜನಾಂಗ ಮತ್ತು ಸಾಮಾನ್ಯ ಜನ ಇದರ ಪ್ರಭಾವಕ್ಕೆ ಒಳಗಾಗಿ ನೈಜ, ಕ್ರಿಯಾತ್ಮಕ ಭಾವನೆಗಳನ್ನು ನಿಧಾನವಾಗಿ ಮರೆಯುತ್ತಾರೆ.
ಇಡೀ ವಾತಾವರಣ ಕಲುಷಿತವಾಗಿದೆಯೇನೋ ಎಂಬ ಭಾವನೆ ಸಾಮಾನ್ಯವಾಗಿ ಎಲ್ಲರಲ್ಲೂ ಉಂಟಾಗುತ್ತದೆ……

ಶಿಕ್ಷಣ, ಮಾಧ್ಯಮ, ಹಿರಿಯರ ಹಿತನುಡಿಗಳು ನಿಜವಾಗಲೂ ಸಂಸ್ಕೃತಿಯ ವಾಹಕಗಳು. ಸಾಂಸ್ಕೃತಿಕ ವಾತಾವರಣ ಅತ್ಯಂತ ಮನೋಲ್ಲಾಸದ, ಅರಿವಿನ, ಜ್ಞಾನದ ನೆಲೆಯಲ್ಲಿ ಸಂಚರಿಸುತ್ತಾ ಪ್ರಜ್ಞಾವಸ್ಥೆಯಲ್ಲಿ ಚಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅದನ್ನು ಹೊರತುಪಡಿಸಿ ಈ ರೀತಿಯ ಮಾಲಿನ್ಯವನ್ನೇ ಹೆಚ್ಚು ಹೆಚ್ಚು ಚರ್ಚಾ ರೂಪದ ಪ್ರಚಾರದಲ್ಲಿರಿಸಿದರೆ, ಇಡೀ ವಾತಾವರಣವೇ ಅದರ ಪ್ರತಿಬಿಂಬವಾಗುತ್ತದೆ…….

ಕ್ರೀಡೆ ಸಾಹಿತ್ಯ ಸಂಗೀತ ವಿಜ್ಞಾನ ಲಲಿತ ಕಲೆಗಳು ಸಮಾಜ ಸೇವೆ ಸಾಹಸ ಮುಂತಾದ ಕ್ಷೇತ್ರಗಳಲ್ಲಿ ಸಾಕಷ್ಟು ಹೋರಾಟಗಳು, ಸಾಧನೆಗಳು, ನಿರಂತರವಾಗಿ ನಡೆಯುತ್ತಿವೆ. ನಮ್ಮ ಮಕ್ಕಳು ಮತ್ತು ಯುವಜನರಿಗೆ ಈ ವಿಷಯಗಳು ನಿರಂತರವಾಗಿ ತಲುಪುತ್ತಲೇ ಇರಬೇಕು…..

ಕೇವಲ ಮನೆಯಲ್ಲಿ, ಶಾಲೆಯಲ್ಲಿ, ಮಾಧ್ಯಮಗಳಲ್ಲಿ ಮಾತ್ರವಲ್ಲ, ಎಲ್ಲ ಕಡೆಯೂ ಸಾಮಾಜಿಕ ಪರಿಸರ ಒಳ್ಳೆಯದನ್ನೇ, ಸಾಧನೆಗಳನ್ನೇ, ಸೇವೆಗಳನ್ನೇ ಹೆಚ್ಚು ಹೆಚ್ಚು ಸುದ್ದಿ – ಚರ್ಚೆ ಮಾಡುತ್ತಿದ್ದರೆ, ಅದರ ಪ್ರಭಾವವು ಎಲ್ಲಾ ಕಡೆ ಪಸರಿಸುತ್ತದೆ……

ಸಾಂಸ್ಕೃತಿಕ ನಾಯಕರಾಗಿ ಬಸವಣ್ಣನವರನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿರುವ ಈ ಸಂದರ್ಭದಲ್ಲಿ ಆ ವಿಷಯ ಹೆಚ್ಚು ಹೆಚ್ಚು ಜನರಿಗೆ ತಲುಪಬೇಕು. ಬಸವ ತತ್ವಗಳು, ಬೌದ್ಧ ತತ್ವಗಳು, ಗಾಂಧಿ ಚಿಂತನೆಗಳು, ಅಂಬೇಡ್ಕರ್ ಚಿಂತನೆಗಳು, ವಿವೇಕಾನಂದರ ವಿಚಾರಗಳು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು, ಪ್ರತಿನಿತ್ಯ ಕನಿಷ್ಠ ಮಕ್ಕಳ ಕಿವಿಗೆ ಬೀಳುವಂತಾದರೂ ಆಗಬೇಕು. ಅದನ್ನು ಹೊರತುಪಡಿಸಿ ವಿಕೃತಗಳೇ ಮಕ್ಕಳಿಗೆ ತಿಳಿಯುತ್ತಿದ್ದರೆ ಅವರು ಜೀವಪರ ನಿಲುವುಗಳನ್ನು ಹೊಂದುವುದಾದರೂ ಹೇಗೆ………

ಆದ್ದರಿಂದ ನಾವುಗಳು ಸಹ ಆದಷ್ಟೂ ಒಳ್ಳೆಯ ಮನಸ್ಸಿನ, ಒಳ್ಳೆಯ ವಿಷಯಗಳನ್ನು ಮನ, ಮನೆ, ಶಾಲೆ, ಗೆಳೆಯರು, ವಾಕಿಂಗ್, ಮೊಬೈಲ್ ಮುಂತಾದ ಎಲ್ಲಾ ಕಡೆ ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ನಿಧಾನವಾಗಿ ನಮ್ಮ ಸಾಂಸ್ಕೃತಿಕ ವಾತಾವರಣ ಉತ್ತಮಗೊಳ್ಳುತ್ತದೆ. ಇದನ್ನು ದಯವಿಟ್ಟು ಪ್ರಯತ್ನಿಸೋಣ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

2 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

2 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

3 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

5 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

11 hours ago