ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ- ಸಚಿವ ಎಂ‌.ಬಿ ಪಾಟೀಲ

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಅವರು ಘಟಕಕ್ಕೆ ಚಾಲನೆ ನೀಡಿದರು.

ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ ಎಂದರು.

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು.

ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ ಎಂದು ಅವರು ನುಡಿದರು.

ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago