ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ- ಸಚಿವ ಎಂ‌.ಬಿ ಪಾಟೀಲ

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಅವರು ಘಟಕಕ್ಕೆ ಚಾಲನೆ ನೀಡಿದರು.

ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ ಎಂದರು.

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು.

ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ ಎಂದು ಅವರು ನುಡಿದರು.

ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago