ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಅವರು ಘಟಕಕ್ಕೆ ಚಾಲನೆ ನೀಡಿದರು.
ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ ಎಂದರು.
ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು.
ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ ಎಂದು ಅವರು ನುಡಿದರು.
ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ ಎಂದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…