Categories: ಲೇಖನ

ಮರೆತರೋ, ನಿರ್ಲಕ್ಷಿಸಿದರೋ, ಮಾರಿಕೊಂಡರೋ ತಮ್ಮ ವಿವೇಚನೆಯನ್ನು…….

ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿರುತ್ತದೆ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ.

ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು ನಿರ್ಲಕ್ಷಿಸಿದರೆ ಅದರ ಪರಿಣಾಮ ಮಾತ್ರ ತುಂಬಾ ಭೀಕರವಾಗಿರುತ್ತದೆ. ಉದಾಹರಣೆಗೆ ತಾಯಿ ಭಾಷೆ, ಇಲ್ಲಿನ ನಿಜ ಸಂಸ್ಕೃತಿಯ ಬಗ್ಗೆ ಇಡೀ ಜನ ಸಮೂಹಕ್ಕೆ ಸರಿಯಾಗಿ ಪರಿಚಯ ಮಾಡಿಕೊಡದಿದ್ದರೆ ಮೊನ್ನೆ ವಿಧಾನ ಮಂಡಲದ ಅಧಿವೇಶನದ ಕೊನೆಯ ದಿನ ಇಬ್ಬರು ಅತ್ಯಂತ ಜವಾಬ್ದಾರಿಯತ ಹಾಲಿ ಮಂತ್ರಿ ಮತ್ತು ಮಾಜಿ ಮಂತ್ರಿ ಕೆಟ್ಟದಾಗಿ ಒಬ್ಬರಿಗೊಬ್ಬರು ಅತ್ಯಂತ ಅಸಹ್ಯಕರವಾಗಿ ಬೈದುಕೊಳ್ಳಲು ಅಥವಾ ಆ ರೀತಿ ಅನೇಕ ಜನರು ಈ ರೀತಿ ಮಾತನಾಡಲು ಬಹು ಮುಖ್ಯ ಕಾರಣವೇ ಈ ರೀತಿಯ ಮುಖ್ಯ ವಾಹಿನಿಗಳ ಸಾಂಸ್ಕೃತಿಕ ನಿರ್ಲಕ್ಷ್ಯವೇ ಕಾರಣ……

ಮುಗಿಯುತ್ತಲಿದೆ ಕನ್ನಡದ ನುಡಿ ಹಬ್ಬ,
ಎಂದೆಂದೂ ಮುಗಿಯಬಾರದ ನಿತ್ಯ ಹಬ್ಬ………

ತಮ್ಮ ಅನ್ನದ ಮೂಲವನ್ನೇ ನಿರ್ಲಕ್ಷಿಸಿದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು…

ಎಷ್ಟೋ ಬೇಡದ ವಿಷಯಗಳನ್ನು ನೇರ ಪ್ರಸಾರ ಮಾಡುತ್ತವೆ. ಮನೆಯ ಜಗಳಗಳನ್ನು ದಿನ ಪೂರ್ತಿ ತೋರಿಸುತ್ತವೆ. ಯಾರದೋ ಆತ್ಮಹತ್ಯೆ, ಕೊಲೆ ಇವರಿಗೆ ಮೂರು ದಿನದ ಸರಕು.
ಇನ್ಯಾವುದೋ ವಂಚನೆ, ದರೋಡೆ ಇವರಿಗೆ ವಾರದ ಆಹಾರ,
ರಾಜಕೀಯ ಭಿನ್ನಮತ ಇವರಿಗೆ ತಿಂಗಳಾನುಗಟ್ಟಲೆ ಹಗಲು ರಾತ್ರಿಗಳ ಬ್ರೇಕಿಂಗ್ ನ್ಯೂಸ್,
ಇಬ್ಬರು ಬಲಾಢ್ಯ ಮಂತ್ರಿಗಳ ಖಾಸಗಿ ಜಗಳ ಸಾಹಿತ್ಯ ಸಮ್ಮೇಳನಕ್ಕಿಂತ ಮಹತ್ವದ ವಿಷಯ……

ಆದರೆ ಕನ್ನಡಮ್ಮನ‌ ಅತ್ಯಂತ ಪ್ರಮುಖ ಜಾತ್ರೆ ಕೇವಲ ಕೆಲವು ನಿಮಿಷಗಳ ಒಂದು ಸುದ್ದಿ ಮಾತ್ರ……..

ಛೇ, ಎಷ್ಟೊಂದು ವಿವೇಕಹೀನ ಸಂಸ್ಕೃತಿಯ ಜನ ಇವರು. ಸಾಹಿತ್ಯಾಸಕ್ತರು ಮತ್ತು ಪಕ್ಕಾ ಕನ್ನಡ ಅಭಿಮಾನಿಗಳನ್ನು ಹೊರತುಪಡಿಸಿ ಅನೇಕರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿದೆ ಎಂದು ತಿಳಿಯಲೇ ಇಲ್ಲ.‌ ಕೆಲವರಿಗೆ ತಿಳಿದರೂ‌ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ. ಅದನ್ನು ಮನೆ ಮನೆಗೆ ತಲುಪಿಸುವ ಅವಕಾಶವಿದ್ದ ಮಾಧ್ಯಮಗಳು ಅನಾವಶ್ಯಕ ವಿಷಯಗಳ ಸುತ್ತಲೇ ಸುತ್ತಿದವು……

ಈಗಾಗಲೇ ಆಂಗ್ಲ ಮಾಧ್ಯಮದ ಮೋಹಕ್ಕೆ, ಬೆರಕೆ ಸಾಂಸ್ಕೃತಿಕ ವಾತಾವರಣದ ಪ್ರಭಾವಕ್ಕೆ ಒಳಗಾಗಿರುವ ಮಕ್ಕಳು ಮತ್ತು ಯುವ ಪೀಳಿಗೆಯನ್ನು ತನ್ನ ತಾಯಿ ಭಾಷೆಯ ಬಗ್ಗೆ ಸ್ವಲ್ಪವಾದರೂ ಹೆಮ್ಮೆ ಮತ್ತು ಜಾಗೃತಿ ಮೂಡಿಸುವ ಕೆಲಸ ಈ ಸಮ್ಮೇಳನದ ಸಂದರ್ಭದಲ್ಲಿ ಮಾಧ್ಯಮಗಳು ನಿರ್ವಹಿಸಬೇಕಿತ್ತು…..

ಸಮ್ಮೇಳನದ ಮೆರವಣಿಗೆ, ಅಧ್ಯಕ್ಷೀಯ ಭಾಷಣ, ವಿಚಾರ ಸಂಕಿರಣಗಳು, ಕವಿಗೋಷ್ಠಿಗಳು, ಪುಸ್ತಕ ಮೇಳ, ಜಾನಪದ ಕಲಾ ಪ್ರದರ್ಶನ, ಕರ್ನಾಟಕದ ವಿವಿಧ ಭಾಗಗಳ ಊಟದ ವೈವಿಧ್ಯತೆ, ಮಂಡಿಸಿದ ಬೇಡಿಕೆಗಳು ಎಲ್ಲವನ್ನೂ ನೇರ ಅಥವಾ ಮುದ್ರಿತ ಪ್ರಸಾರ ಮಾಡಬಹುದಿತ್ತು……

ಅಲ್ಲದೆ ಈ ನೆಪದಲ್ಲಿ ತಾಯಿ ಭಾಷೆಯ ಉಗಮ, ಬೆಳವಣಿಗೆ, ಮಹತ್ವ, ಸಾಧನೆ, ಭವಿಷ್ಯ, ಎಚ್ಚರಿಕೆ, ಕರ್ನಾಟಕದ ಸಮಗ್ರ ಅಭಿವೃದ್ಧಿ ಎಲ್ಲವನ್ನೂ ವಿಷಯ ತಜ್ಞರಿಂದ ತಮ್ಮ ಕೇಂದ್ರಿಂದಲೇ ಚರ್ಚಿಸಬಹುದಿತ್ತು…….

ವಿಶ್ವದ ವಿವಿಧ ಭಾಷೆಗಳು ಹೇಗೆ ಆಂಗ್ಲ ಭಾಷೆಯ ಹೊಡೆತಕ್ಕೆ ಸಿಲುಕಿ ನಾಶ ಹೊಂದುತ್ತಿವೆ, ಭಾರತದಲ್ಲಿ ಹಿಂದಿ ಹೇರಿಕೆ ಹೇಗೆ ಅಪಾಯಕಾರಿ, ಆ ಮುಖಾಂತರ ತಮ್ಮ ಬದುಕಿನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿವೆ,
ತಾಯಿ ಭಾಷೆಯ ಕಲಿಕೆ ಹೇಗೆ ನಮ್ಮ ಯೋಚನೆ ಮತ್ತು ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ, ಕನ್ನಡವನ್ನು ನಾವು ಹೇಗೆ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸ್ವಲ್ಪವಾದರೂ ಪ್ರಯತ್ನಿಸಬೇಕಿತ್ತು…..

ಅದು ಯಾವುದೂ ಪ್ರಸಾರವಾಗಲೇ ಇಲ್ಲ. ನೆಪಕ್ಕೆ ಸಮ್ಮೇಳನದ ಕೆಲವು ತುಣುಕುಗಳು ಮಾತ್ರ ಕಾಣಿಸಿದವು. ಸಮಕಾಲೀನ ವಿಷಯಗಳಿಗೆ ಮಹತ್ವ ನೀಡದೆ, ಆಳದ ಚಿಂತನೆ ನಡೆಸದೆ, ಕೇವಲ ಹಣದ ಮೋಹದ ಹಿಂದೆ ಬಿದ್ದು, ನಿರೂಪಕರೆಂಬ ಬಾಯಿಬುಡುಕ ಸಂಸ್ಕೃತಿಯ ಜನರನ್ನು ಸೃಷ್ಟಿಸಿ, ಜನರನ್ನು ಮರುಳು ಮಾಡುತ್ತಿರುವ ಕನ್ನಡ ಟಿವಿ ವಾರ್ತಾ ಮಾಧ್ಯಮಗಳಿಗೆ ಈ ಮೂಲಕ ಛೀಮಾರಿ ಹಾಕುತ್ತಾ……

ಅದೇ ರೀತಿ ತುಂಬಾ ಎಚ್ಚರಿಕೆಯಿಂದ ಕಾರ್ಯಕ್ರಮದ ಬಹಳಷ್ಟು ಸುದ್ದಿಗಳನ್ನು ಮುಖಪುಟದಲ್ಲಿ ಪ್ರಕಟಿಸಿದ ಕನ್ನಡದ ಕೆಲವು ಪತ್ರಿಕಾ ಮಾಧ್ಯಮವನ್ನು ಅಭಿನಂದಿಸುತ್ತಾ….

ಇನ್ನಾದರೂ ಟಿವಿ ವಾಹಿನಿಗಳು ಎಚ್ಚೆತ್ತುಕೊಳ್ಳಲಿ ಎಂದು ಆಶಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

7 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

13 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

14 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

17 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

18 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago