Categories: ಲೇಖನ

ಮರೆತರೋ, ನಿರ್ಲಕ್ಷಿಸಿದರೋ, ಮಾರಿಕೊಂಡರೋ ತಮ್ಮ ವಿವೇಚನೆಯನ್ನು…….

ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿರುತ್ತದೆ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ.

ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು ನಿರ್ಲಕ್ಷಿಸಿದರೆ ಅದರ ಪರಿಣಾಮ ಮಾತ್ರ ತುಂಬಾ ಭೀಕರವಾಗಿರುತ್ತದೆ. ಉದಾಹರಣೆಗೆ ತಾಯಿ ಭಾಷೆ, ಇಲ್ಲಿನ ನಿಜ ಸಂಸ್ಕೃತಿಯ ಬಗ್ಗೆ ಇಡೀ ಜನ ಸಮೂಹಕ್ಕೆ ಸರಿಯಾಗಿ ಪರಿಚಯ ಮಾಡಿಕೊಡದಿದ್ದರೆ ಮೊನ್ನೆ ವಿಧಾನ ಮಂಡಲದ ಅಧಿವೇಶನದ ಕೊನೆಯ ದಿನ ಇಬ್ಬರು ಅತ್ಯಂತ ಜವಾಬ್ದಾರಿಯತ ಹಾಲಿ ಮಂತ್ರಿ ಮತ್ತು ಮಾಜಿ ಮಂತ್ರಿ ಕೆಟ್ಟದಾಗಿ ಒಬ್ಬರಿಗೊಬ್ಬರು ಅತ್ಯಂತ ಅಸಹ್ಯಕರವಾಗಿ ಬೈದುಕೊಳ್ಳಲು ಅಥವಾ ಆ ರೀತಿ ಅನೇಕ ಜನರು ಈ ರೀತಿ ಮಾತನಾಡಲು ಬಹು ಮುಖ್ಯ ಕಾರಣವೇ ಈ ರೀತಿಯ ಮುಖ್ಯ ವಾಹಿನಿಗಳ ಸಾಂಸ್ಕೃತಿಕ ನಿರ್ಲಕ್ಷ್ಯವೇ ಕಾರಣ……

ಮುಗಿಯುತ್ತಲಿದೆ ಕನ್ನಡದ ನುಡಿ ಹಬ್ಬ,
ಎಂದೆಂದೂ ಮುಗಿಯಬಾರದ ನಿತ್ಯ ಹಬ್ಬ………

ತಮ್ಮ ಅನ್ನದ ಮೂಲವನ್ನೇ ನಿರ್ಲಕ್ಷಿಸಿದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು…

ಎಷ್ಟೋ ಬೇಡದ ವಿಷಯಗಳನ್ನು ನೇರ ಪ್ರಸಾರ ಮಾಡುತ್ತವೆ. ಮನೆಯ ಜಗಳಗಳನ್ನು ದಿನ ಪೂರ್ತಿ ತೋರಿಸುತ್ತವೆ. ಯಾರದೋ ಆತ್ಮಹತ್ಯೆ, ಕೊಲೆ ಇವರಿಗೆ ಮೂರು ದಿನದ ಸರಕು.
ಇನ್ಯಾವುದೋ ವಂಚನೆ, ದರೋಡೆ ಇವರಿಗೆ ವಾರದ ಆಹಾರ,
ರಾಜಕೀಯ ಭಿನ್ನಮತ ಇವರಿಗೆ ತಿಂಗಳಾನುಗಟ್ಟಲೆ ಹಗಲು ರಾತ್ರಿಗಳ ಬ್ರೇಕಿಂಗ್ ನ್ಯೂಸ್,
ಇಬ್ಬರು ಬಲಾಢ್ಯ ಮಂತ್ರಿಗಳ ಖಾಸಗಿ ಜಗಳ ಸಾಹಿತ್ಯ ಸಮ್ಮೇಳನಕ್ಕಿಂತ ಮಹತ್ವದ ವಿಷಯ……

ಆದರೆ ಕನ್ನಡಮ್ಮನ‌ ಅತ್ಯಂತ ಪ್ರಮುಖ ಜಾತ್ರೆ ಕೇವಲ ಕೆಲವು ನಿಮಿಷಗಳ ಒಂದು ಸುದ್ದಿ ಮಾತ್ರ……..

ಛೇ, ಎಷ್ಟೊಂದು ವಿವೇಕಹೀನ ಸಂಸ್ಕೃತಿಯ ಜನ ಇವರು. ಸಾಹಿತ್ಯಾಸಕ್ತರು ಮತ್ತು ಪಕ್ಕಾ ಕನ್ನಡ ಅಭಿಮಾನಿಗಳನ್ನು ಹೊರತುಪಡಿಸಿ ಅನೇಕರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿದೆ ಎಂದು ತಿಳಿಯಲೇ ಇಲ್ಲ.‌ ಕೆಲವರಿಗೆ ತಿಳಿದರೂ‌ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ. ಅದನ್ನು ಮನೆ ಮನೆಗೆ ತಲುಪಿಸುವ ಅವಕಾಶವಿದ್ದ ಮಾಧ್ಯಮಗಳು ಅನಾವಶ್ಯಕ ವಿಷಯಗಳ ಸುತ್ತಲೇ ಸುತ್ತಿದವು……

ಈಗಾಗಲೇ ಆಂಗ್ಲ ಮಾಧ್ಯಮದ ಮೋಹಕ್ಕೆ, ಬೆರಕೆ ಸಾಂಸ್ಕೃತಿಕ ವಾತಾವರಣದ ಪ್ರಭಾವಕ್ಕೆ ಒಳಗಾಗಿರುವ ಮಕ್ಕಳು ಮತ್ತು ಯುವ ಪೀಳಿಗೆಯನ್ನು ತನ್ನ ತಾಯಿ ಭಾಷೆಯ ಬಗ್ಗೆ ಸ್ವಲ್ಪವಾದರೂ ಹೆಮ್ಮೆ ಮತ್ತು ಜಾಗೃತಿ ಮೂಡಿಸುವ ಕೆಲಸ ಈ ಸಮ್ಮೇಳನದ ಸಂದರ್ಭದಲ್ಲಿ ಮಾಧ್ಯಮಗಳು ನಿರ್ವಹಿಸಬೇಕಿತ್ತು…..

ಸಮ್ಮೇಳನದ ಮೆರವಣಿಗೆ, ಅಧ್ಯಕ್ಷೀಯ ಭಾಷಣ, ವಿಚಾರ ಸಂಕಿರಣಗಳು, ಕವಿಗೋಷ್ಠಿಗಳು, ಪುಸ್ತಕ ಮೇಳ, ಜಾನಪದ ಕಲಾ ಪ್ರದರ್ಶನ, ಕರ್ನಾಟಕದ ವಿವಿಧ ಭಾಗಗಳ ಊಟದ ವೈವಿಧ್ಯತೆ, ಮಂಡಿಸಿದ ಬೇಡಿಕೆಗಳು ಎಲ್ಲವನ್ನೂ ನೇರ ಅಥವಾ ಮುದ್ರಿತ ಪ್ರಸಾರ ಮಾಡಬಹುದಿತ್ತು……

ಅಲ್ಲದೆ ಈ ನೆಪದಲ್ಲಿ ತಾಯಿ ಭಾಷೆಯ ಉಗಮ, ಬೆಳವಣಿಗೆ, ಮಹತ್ವ, ಸಾಧನೆ, ಭವಿಷ್ಯ, ಎಚ್ಚರಿಕೆ, ಕರ್ನಾಟಕದ ಸಮಗ್ರ ಅಭಿವೃದ್ಧಿ ಎಲ್ಲವನ್ನೂ ವಿಷಯ ತಜ್ಞರಿಂದ ತಮ್ಮ ಕೇಂದ್ರಿಂದಲೇ ಚರ್ಚಿಸಬಹುದಿತ್ತು…….

ವಿಶ್ವದ ವಿವಿಧ ಭಾಷೆಗಳು ಹೇಗೆ ಆಂಗ್ಲ ಭಾಷೆಯ ಹೊಡೆತಕ್ಕೆ ಸಿಲುಕಿ ನಾಶ ಹೊಂದುತ್ತಿವೆ, ಭಾರತದಲ್ಲಿ ಹಿಂದಿ ಹೇರಿಕೆ ಹೇಗೆ ಅಪಾಯಕಾರಿ, ಆ ಮುಖಾಂತರ ತಮ್ಮ ಬದುಕಿನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿವೆ,
ತಾಯಿ ಭಾಷೆಯ ಕಲಿಕೆ ಹೇಗೆ ನಮ್ಮ ಯೋಚನೆ ಮತ್ತು ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ, ಕನ್ನಡವನ್ನು ನಾವು ಹೇಗೆ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸ್ವಲ್ಪವಾದರೂ ಪ್ರಯತ್ನಿಸಬೇಕಿತ್ತು…..

ಅದು ಯಾವುದೂ ಪ್ರಸಾರವಾಗಲೇ ಇಲ್ಲ. ನೆಪಕ್ಕೆ ಸಮ್ಮೇಳನದ ಕೆಲವು ತುಣುಕುಗಳು ಮಾತ್ರ ಕಾಣಿಸಿದವು. ಸಮಕಾಲೀನ ವಿಷಯಗಳಿಗೆ ಮಹತ್ವ ನೀಡದೆ, ಆಳದ ಚಿಂತನೆ ನಡೆಸದೆ, ಕೇವಲ ಹಣದ ಮೋಹದ ಹಿಂದೆ ಬಿದ್ದು, ನಿರೂಪಕರೆಂಬ ಬಾಯಿಬುಡುಕ ಸಂಸ್ಕೃತಿಯ ಜನರನ್ನು ಸೃಷ್ಟಿಸಿ, ಜನರನ್ನು ಮರುಳು ಮಾಡುತ್ತಿರುವ ಕನ್ನಡ ಟಿವಿ ವಾರ್ತಾ ಮಾಧ್ಯಮಗಳಿಗೆ ಈ ಮೂಲಕ ಛೀಮಾರಿ ಹಾಕುತ್ತಾ……

ಅದೇ ರೀತಿ ತುಂಬಾ ಎಚ್ಚರಿಕೆಯಿಂದ ಕಾರ್ಯಕ್ರಮದ ಬಹಳಷ್ಟು ಸುದ್ದಿಗಳನ್ನು ಮುಖಪುಟದಲ್ಲಿ ಪ್ರಕಟಿಸಿದ ಕನ್ನಡದ ಕೆಲವು ಪತ್ರಿಕಾ ಮಾಧ್ಯಮವನ್ನು ಅಭಿನಂದಿಸುತ್ತಾ….

ಇನ್ನಾದರೂ ಟಿವಿ ವಾಹಿನಿಗಳು ಎಚ್ಚೆತ್ತುಕೊಳ್ಳಲಿ ಎಂದು ಆಶಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

17 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

19 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

19 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

19 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

21 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

1 day ago